ಕುಶಾಲನಗರ, ಜ 22: ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದಾರೆ.
ಈ ಹಿನ್ನಲೆಯಲ್ಲಿ ಭಾರತ್ ಮಾತಾ ಶಾಲಾ ಮುಂಭಾಗದ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ದತೆ ನಡೆಯುತ್ತಿದೆ. ಹಾರಂಗಿ ನೀರಾವರಿ ನಿಗಮದ ಅಧಿಕಾರಿ ವರ್ಗ ಸಿದ್ದತಾ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Back to top button
error: Content is protected !!