ಶಿಕ್ಷಣ

ಅಪ್ರತಿಮ ಸಾಧಕಿ ಬಾನಂಡ ವಿದ್ಯಾಶ್ರೀ ಗೆ ಪ್ರಶಸ್ತಿ

ಕುಶಾಲನಗರ ಮಾ 27: ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್ ಸಿ ಇ ಆರ್ ಟಿ )ಯಲ್ಲಿ 2019 ರಿಂದ 2023 ರ ಸಾಲಿನ ಬಿಎಸ್ಸಿ ಬಿಎಡ್ ಇಂಟಿಗ್ರೇಟೆಡ್ ( ಪಿಸಿಎಂ ) ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಇವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ದೊರಕಿದೆ.
ಮೂಲತಃ ಮಡಿಕೇರಿ ನಿವಾಸಿಯಾಗಿರುವ
ಕುಶಾಲನಗರದ ಕೊಪ್ಪಾದಲ್ಲಿ ವಾಸವಿರುವ ಇವರು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದರು.
ನಂತರ ಮಡಿಕೇರಿ ಸಂತ ಜೋಸೆಫರ ಪಿಯು ಕಾಲೇಜಿನ ದ್ವಿತೀಯ ಪಿಯುಸಿಯಲ್ಲೂ ಗಣನೀಯ ಸಾಧನೆ ಮಾಡಿದ್ದರು.
ಹುಣಸೂರು ವನ್ಯಜೀವಿ ವಿಭಾಗದ ದೊಡ್ಡಹರವೆ ಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ದಲ್ಲಿರುವ ಬಾನಂಡ ದೇವಿಪ್ರಸಾದ್ ಹಾಗು ಪಿ.ಎಂ.ನೈನಾ ದಂಪತಿಗಳ ಪುತ್ರಿಯಾಗಿರುವ ವಿದ್ಯಾಶ್ರೀ ಇದೀಗ ಮೈಸೂರಿನಲ್ಲಿರುವ ಕರ್ನಾಟಕ ವಿಶ್ವ ವಿದ್ಯಾನಿಲಯದಲ್ಲಿ ಎಂಎಸ್ಸಿ ಎಂಎಡ್ ಸ್ನಾತ ಕೋತ್ತರ ಪದವಿಗೆ ಸೇರ್ಪಡೆಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!