ಕುಶಾಲನಗರ, ಆ 29: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಾಲೂಕು ಮಟ್ಟದ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಕುಶಾಲನಗರದ ಜಂಪ್ ಸ್ಮ್ಯಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕ್ರೀಡೆ ಎಂಬುದು ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಲು, ತಮ್ಮ ಗುರಿಸಾಧನೆಗೆ ಸದೃಢ ಮನಸ್ಸು ಹಾಗೂ ದೇಹ ಎರಡೂ ಮುಖ್ಯ. ಕ್ರೀಡಾ ಚಟುವಟಿಕೆಗಳು ದೇಹ ಹಾಗೂ ಮನಸ್ಸನ್ನು ಸದೃಢಗೊಳಿಸುತ್ತದೆ. ಏಕಾಗ್ರತೆ ಮೂಡಿಸಲು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಭಾರತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ. ರಾಮಕೃಷ್ಣ ಮಾತನಾಡಿ, ಕ್ರೀಡಾಪಟುಗಳು ಉತ್ತಮ ಸಾಧನೆ ತೋರುವ ಮೂಲಕ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಶುಭ ಕೋರಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ಶನಿವಾರಸಂತೆಯ ಭಾರತಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಅಶೋಕ್ ಮಾತನಾಡಿದರು.
ಈ ಸಂದರ್ಭ ಕನ್ನಡ ಭಾರತಿ ಪಪೂ ಕಾಲೇಜು ಪ್ರಾಂಶುಪಾಲ ಎನ್.ನಾಗೇಂದ್ರಸ್ವಾಮಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಸೇರಿದಂತೆ ಉಪನ್ಯಾಸಕ ವೃಂದದವರು, ಕ್ರೀಡಾಪಟುಗಳು, ತೀರ್ಪುಗಾರರು ಇದ್ದರು.
Back to top button
error: Content is protected !!