ಟ್ರೆಂಡಿಂಗ್
ವಸತಿ ಯೋಜನೆ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸೋಮವಾರಪೇಟೆ, ಕುಶಾಲನಗರ ತಾಲೂಕು ಪಂಚಾಯತ್, ರಾಜೀವ ಗಾಂಧಿ ವಸತಿ ನಿಗಮದ ಆಶ್ರಯದಲ್ಲಿ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾದ 800 ಮಂದಿ ಫಲಾನುಭವಿಗಳಿಗೆ ಮಡಿಕೇರಿ ಕ್ಷೇತ್ರ ಶಾಸಕರಾದ ಅಪ್ಪಚ್ಚುರಂಜನ್ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿದರು.
ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು.
ತಾಪಂ ಇಒ ಜಯಣ್ಣ, ವಿವಿಧ ಗ್ರಾಪಂ ಅಧ್ಯಕ್ಷರುಗಳು, ಅಧಿಕಾರಿಗಳು ಇದ್ದರು.




