ಕುಶಾಲನಗರ, ಮಾ 13: ಕೆಲವು ದಿನಗಳಿಂದ ಸಂಜೆ 5:00 ಗಂಟೆಯಿಂದ 7:30 ತನಕ ವಿದ್ಯುತ್ ಸ್ಥಗಿತಗೊಳಿಸುತ್ತಿದ್ದು, ಮಕ್ಕಳ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಮಾಡುತ್ತಿರುವ ವಿದ್ಯುತ್ ನಿಗಮಕ್ಕೆ ಎಚ್ಚರಿಕೆ ನೀಡಿದ್ದು ಮುಂದಿನ ಏಪ್ರಿಲ್ ನಾಲ್ಕರವರೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ತೆಗೆಯಬಾರದು. ತೆಗೆದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಕರವೇ ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಎಚ್ಚರಿಸಿದ್ದಾರೆ.
Back to top button
error: Content is protected !!