ಕುಶಾಲನಗರ, ಜು. 31: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಲುಗುಪ್ಪೆ ಗ್ರಾಮದ ಬಸ್ ತಂಗುದಾಣದಲ್ಲಿ ಅಂದಾಜು 30 ಕೆ.ಜಿ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಹಿತ ಆರೋಪಿಯನ್ನು ಬಂಧಿಸಿದರು.
ಬಾಣವಾರ ಉಪ ವಲಯ ಅರಣ್ಯ ಅಧಿಕಾರಿಗೆ ದೊರೆತ ಮಾಹಿತಿಯ ಮೇರೆಗೆ ದಾಳಿ ಮಾಡಿ ಆರೋಪಿ ಶನಿವಾರಸಂತೆ ಹೊಲಗುಂದ ನಿವಾಸಿ ಪ್ರತಾಪ್ ಎಂಬಾತನನ್ನು ಬಂಧಿಸಿ ಮಾಲು ವಶಪಡಿಸಿಕೊಂಡಿದ್ದಾರೆ.
ಕಾರ್ಯಚರಣೆಯಯಲ್ಲಿ ಬಾಣವಾರ ಉಪ ವಲಯ ಅರಣ್ಯಾಧಿಕಾರಿ ಶ್ರವಣಕುಮಾರ್, ಗಸ್ತು ವನಪಾಲಕ ಈರಣ್ಣ, ಪ್ರವೀಣ್ ಕುಮಾರ್, ಸಿಬ್ಬಂದಿಗಳಾದ ವೇದ, ಪ್ರವೀಣ್, ಸಂತೋಷ್, ನಾಗರಾಜ್, ಸಂಜಯ್, ಧರ್ಮ ಇದ್ದರು.
Back to top button
error: Content is protected !!