ಆರೋಗ್ಯ

ಮಕ್ಕಳ ಆರೋಗ್ಯ ಕಾಪಾಡುವುದು ತಾಯಂದಿರ ಆದ್ಯ ಕರ್ತವ್ಯ: ಕೆ.ಬಿ.ಶಂಶುದ್ಧೀನ್

ಕುಶಾಲನಗರ,ಸೆ೧೦: ತಾಯಂದಿರು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ನೀಡುವ ಮೂಲಕ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಹೇಳಿದರು.‌
ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಅಂಗನವಾಡಿಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶಭರಿತ ಆಹಾರಗಳನ್ನು ಸೇವಿಸಬೇಕು. ಸೊಪ್ಪು ತರಕಾರಿಗಳನ್ನು ಸೇವಿಸಬೇಕು. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಬಹುದಾಗಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸತ್ವಭರಿತ, ಪೌಷ್ಟಕ ಆಹಾರಗಳನ್ನು ನೀಡಲಾಗುತ್ತದೆ. ಅದರಂತೆ ಮನೆಯಲ್ಲಿಯೂ ತಾಯಂದಿರು ಇದನ್ನು ಮುಂದುವರೆಸಬೇಕು. ಮಕ್ಕಳ ಆರೋಗ್ಯವನ್ನು ಹದಗೆಡಿಸುವಂತಹ ಆಹಾರಗಳನ್ನು ನೀಡಬಾರದು. ಇದು ಮಕ್ಕಳ‌ ಆರೋಗ್ಯದ ಮೇಲೆ ನೇರ ಪರಿಣಾಮ‌ ಬೀರಲಿದೆ ಎಂದರು.
ಹಾರಂಗಿ ಬಿ ವ್ಯಾಪ್ತಿಯ ಸಮುದಾಯ ಆರೋಗ್ಯಾಧಿಕಾರಿ ಸೌಮ್ಯ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತಾಯಂದಿರು ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಮಾತ್ರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿಗಳ ಬಗ್ಗೆ ಸವಿವರವಾಗಿ ವಿವರಿಸಿದರು.‌
ಈ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಿ,ಫಲ ತಾಂಬೂಲ ನೀಡಲಾಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸುಮಿತ್ರ, ಸ್ಥಳೀಯರಾದ ಸುರಕ್ಷಾ, ಸ್ವಪ್ನ, ಶಿವರಂಜಿನಿ, ಅಕ್ಷತಾ, ವಿಲ್ಮಾ, ಭುವನ ಹಾಗೂ ಇನ್ನಿತರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!