ಕುಶಾಲನಗರ, ಅ. 07:ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮುಳ್ಳುಸೋಗೆ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕುಶಾಲನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಾಹಿತಿ ಹಾಗೂ ಚಿಂತಕ ಡಾ.ಹೆಚ್.ಕೆ.ನರಸಿಂಹಮೂರ್ತಿ ಅವರು ವಾಲ್ಮೀಕಿ ಜಯಂತಿ ಕುರಿತು ಮಾತನಾಡಿದರು. ವಾಲ್ಮೀಕಿ ರಾಮಾಯಣ ಭಾರತೀಯ ಸಂಸ್ಕೃತಿಯ ಬೆಳೆದು ಬಂದ ವಿಧಾನ, ಕೌಟುಂಬಿಕ ವ್ಯವಸ್ಥೆಯ ಬಗ್ಗೆ ಸಮಾಜಕ್ಕೆ ಕಟ್ಟಿಕೊಟ್ಟ ಕಾವ್ಯ ಎಂದು ಬಣ್ಣಿಸಿದರು. ಜಗತ್ತಿನ ಮೊದಲ ಕಾವ್ಯ ರಚಿಸಿದ ಕೀರ್ತಿ ವಾಲ್ಮೀಕಿ ಮಹರ್ಷಿ ಅವರದ್ದಾಗಿದೆ ಎಂದರು.
ಕುಶಾಲನಗರ. ತಾಲ್ಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮಾತನಾಡಿ, ವಾಲ್ಮೀಕಿ ಮಹರ್ಷಿ ರಚಿಸಿದ ರಾಮಾಯಣ ಕೃತಿಯ ಮಹತ್ವದ ಬಗ್ಗೆ ವಿವರಿಸಿದರು. ರಾಮಾಯಣ ರಚಿಸುವ ಮೂಲಕ ಮಹರ್ಷಿಗಳು ಸಮಗ್ರ ಭಾರತೀಯ ಸಂಸ್ಕೃತಿಯ ಮೇಲೆ ಪ್ರಭಾವ ಬೀರಿದ್ದಾರೆ. ಸರ್ವರೂ ಇವರ ಸಾಧನೆಗೆ ಗೌರವ ಸಮರ್ಪಣೆ ಮಾಡಬೇಕಿದೆ ಎಂದರು.
ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ವಾಲ್ಮೀಕಿ ಮಹರ್ಷಿ ಭಾರತೀಯ ಪುರಾಣ ಸಾಹಿತ್ಯದಲ್ಲಿ ವಿಶಿಷ್ಟ ಸ್ಥಾನ ಪಡೆದ ಮಹಾನ್ ಖುಷಿ. ವಾಲ್ಮೀಕಿ ಅವರ ರಾಮಾಯಣದ ಮೂಲಕ ನಾವು ನೈತಿಕತೆ, ಧೈರ್ಯ, ಶ್ರಧ್ಧೆ ಭಕ್ತಿಯಂತಹ ಗುಣಗಳು, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೆ.ಎನ್. ಆಶೋಕ್ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮಮ್ಮ, ಸದಸ್ಯರಾದ ಜಯಲಕ್ಷ್ಮಿ ನಂಜುಂಡಸ್ವಾಮಿ, ವಿ.ಜೆ. ನವೀನ್, ಮುಖ್ಯಾಧಿಕಾರಿ ಗಿರೀಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ತಾಲ್ಲೂಕು ಪಂಚಾಯತಿ ಅಧಿಕಾರಿ ಶ್ರೀನಿವಾಸ್, ಡಿಆರ್ಎಫ್ ಒ ವೆಂಕಟೇಶ್, ವಿವಿಧ ಸಂಘಟನೆಗಳ ಮುಖಂಡರಾದ ಕೆ.ಬಿ.ರಾಜು, ದಾಮೋದರ್, ಸಿದ್ದಪ್ಪ, ಎಂ.ಕೃಷ್ಣ, ಚಂದನ್ ಕುಮಾರ್, ಶ್ರೀನಿವಾಸ್, ಸಂತೋಷ್, ಕರಿಯಪ್ಪ, ಸುಶೀಲಾ, ಸ್ವಾಮಿ, ರಮೇಶ್, ಸುರೇಶ್, ಡಯಟ್ ಉಪನ್ಯಾಸಕಿ ಪುಷ್ಪಾ, ಸಮಾಜ ಕಲ್ಯಾಣ ಇಲಾಖೆಯ ಮಧು, ಸಂಘದ ಜಿಲ್ಲಾ ಸಮಿತಿ ನಿರ್ದೇಶಕರು ಇದ್ದರು.
Back to top button
error: Content is protected !!