ಸಭೆ

ಕುಶಾಲನಗರ ಗುಂಡುರಾವ್ ಬಡಾವಣೆಯಲ್ಲಿ ಕ್ರೀಡಾಂಗಣಕ್ಕೆ‌ ಜಾಗ ಕೋರಿ ಶಾಸಕರಿಗೆ ಮನವಿ

ಹಂತಹಂತವಾಗಿ ಬೇಡಿಕೆ ಈಡೇರಿಕೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚೆ

ಕುಶಾಲನಗರ, ಡಿ 01: ಕುಶಾಲನಗರದ ಗುಂಡುರಾವ್ ಕ್ರೀಡಾಂಗಣ ಸಮಿತಿ ವತಿಯಿಂದ ಕ್ರೀಡಾಂಗಣಕ್ಕೆ‌ ಬೇಡಿಕೆಯಿರಿಸಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರಿಗೆ ಸಮಿತಿಯ ಮೂಲಕ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಅವರು, ನಿಮ್ಮೆಲ್ಲರಂತೆ ಕ್ರೀಡೆಯನ್ನು ಪ್ರೋತ್ಸಾಹಿಸಬೇಕೆನ್ನುವ ಇಚ್ಚೆ‌ ನನ್ನಲ್ಲೂ ಇದೆ. ಯುವ ಪೀಳಿಗೆ ದಾರಿ ತಪ್ಪದಂತೆ ನೋಡಿಕೊಳ್ಳುವುದು‌ ನಮ್ಮೆಲ್ಲರ ಜವಬ್ದಾರಿ. ಈ ಹಿನ್ನೆಲೆಯಲ್ಲಿ ನಿಮ್ಮ ಆಶಯದಂತೆ ನಾವು ಕೂಡ‌ ನಿಮ್ಮ ಜೊತೆಯಲ್ಲಿರುತ್ತೇವೆ ಎಂದು ಭರವಸೆ ನೀಡಿದರು.

ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಸಭೆಯಲ್ಲಿ ಸಮಿತಿಗೆ ಹೆಚ್ಚಿನ ಮಂದಿಯ ಸದಸ್ಯತ್ವ ಪಡೆದು ನಂತರ ಸಮಿತಿ ನೊಂದಾಯಿಸಿಕೊಳ್ಳಲು ನಿರ್ಧರಿಸಲಾಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಒಟ್ಟಿಗೆ ಸೇರಿ ಸೋಮವಾರ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಅವರಿಗೆ ಮನವಿ ಸಲ್ಲಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ ಸಮಿತಿಗೆ ಕುಶಾಲನಗರದ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಹಂತಹಂತವಾಗಿ ನಮ್ಮ ಬೇಡಿಕೆ ಈಡೇರಿಕೆಗೆ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಬಗ್ಗೆ ನಿರ್ಧರಿಸಲಾಯಿತು.

ಸಭೆಯಲ್ಲಿ ನಂಜರಾಯಪಟ್ಟಣ ಗ್ರಾಪಂ ಸದಸ್ಯ ರಕ್ಷಿತ್‌ಮಾವಜಿ, ಉದ್ಯಮಿ ಭಾಷಾ, ಸಮಿತಿ ಗೌರವಾಧ್ಯಕ್ಷ ಪವನ್ ಗಣಪತಿ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!