ಕುಶಾಲನಗರ, ಜ 03: ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ
ವಾಸವಿ ಸಪ್ತಾಹದ ಅಂಗವಾಗಿ ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿಯ ಕಾವೇರಿ ನದಿ ತಟದಲ್ಲಿ 181 ನೇ ಮಹಾಆರತಿ ಕಾರ್ಯಕ್ರಮ ನಡೆಯಿತು.
ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿ ಆಶ್ರಯದಲ್ಲಿ ಕಾವೇರಿ ಆರತಿ ಬಳಗದ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್, ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಅಪ್ಪಚ್ಚುರಂಜನ್, ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮತ್ತಿತರ ಗಣ್ಯರು ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು.
Back to top button
error: Content is protected !!