


ಕುಶಾಲನಗರ, ಜ 06: ಕುಶಾಲನಗರ ಪುರಸಭೆ ವ್ಯಾಪ್ತಿಯ 17 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್ ಮತ್ತು ಇಬ್ಬರು ವಿಕಲಚೇತನ ಫಲಾನುಭವಿಗಳಿಗೆ ರೂ 23,750, ನಾಲ್ಕು ಮಂದಿಗೆ ಮನೆ ದುರಸ್ಥಿಗೆ ತಲಾ 20000 ಸಾವಿರ ರೂಗಳ ಸಹಾಯಧನ ಚೆಕ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಪುರಸಭೆ ಕಛೇರಿಯಲ್ಲಿ ಹಸ್ತಾಂತರ ಮಾಡಿದರು. ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖ್ಯಾಧಿಕಾರಿ ಗಿರೀಶ್, ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ್, ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಜಿಲ್ಲಾಧ್ಯಕ್ಷ ಆದಂ ಎಸ್ ಮತ್ತಿತರರು ಇದ್ದರು.