ಕುಶಾಲನಗರ, ಜ 06: ಕುಶಾಲನಗರ ವ್ಯಾಪ್ತಿಯಲ್ಲಿ ಎರಡು ಕೋಟಿ ರೂಗಳಲ್ಲಿ ವಿವಿಧೆಡೆ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲನೆ ನಡೆಸಿದರು.
ಮುಳ್ಳುಸೋಗೆ ತಪೋವನಕ್ಕೆ ತೆರಳುವ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ವೇಳೆ ರಸ್ತೆ ಬದಿಯಲ್ಲಿ ಹರಡಿದ್ದ ಕಸದ ರಾಶಿ ಕಂಡು ಆಕ್ರೋಶಗೊಂಡ ಶಾಸಕರು ಕೂಡಲೆ ಕಸ ತೆರವುಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು. ಸಿಸಿ ಕ್ಯಾಮೆರ ಪರಿಶೀಲಿಸಿ ಕಸ ಬಿಸಾಡುವವರನ್ನು ಪತ್ತೆಹಚ್ಚಿ ಕಟ್ಟು ನಿಟ್ಟಾಗಿ ಕ್ರಮಕೈಗೊಳ್ಳಲು ಶಾಸಕರು ಮುಖ್ಯಾಧಿಕಾರಿ ಗಿರೀಶ್ ಅವರಿಗೆ ಸೂಚಿಸಿದರು.
Back to top button
error: Content is protected !!