ಆರೋಪ

ನಕಲಿ ಜಾತಿ ಪ್ರಮಾಣ‌ಪತ್ರ ಪಡೆದು ಇತರರ ಮೇಲೆ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಒತ್ತಾಯ

ಕುಶಾಲನಗರ, ಜು 03:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಹೋಬಳಿಯ ಸುತ್ತ ಮುತ್ತ ಕೆಲವು ವಂಚಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ನಕಲು ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಅಮಾಯಕ ಸಣ್ಣ ಸಣ್ಣ OBC ಸಮುದಾಯದವರ ಮೇಲೆ ಅಟ್ರಾಸಿಟಿ ಕೇಸುಗಳನ್ನು ಹಾಕಿ ದೌರ್ಜನ್ಯ ಮಾಡುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ.ಅರುಣ್ ಕುಮಾರ್ ಖಂಡಿಸಿದ್ದಾರೆ

ಸಮಗ್ರವಾಗಿ ತನಿಖೆ ಮಾಡಿ
ನಕಲಿ ಜಾತಿ ಪತ್ರಗಳ ಪಡೆದವರ ವಿರುದ್ಧ
ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳು, ಸೋಮವಾರಪೇಟೆಯ ತಹಸಿಲ್ದಾರ್, ಸಮಾಜ ಕಲ್ಯಾಣ ಇಲಾಖೆ,ಇದರ ಬಗ್ಗೆ ತನಿಖೆ ಮಾಡಿ,
ಅಮಾಯಕ ಶೋಷಿತ ಸಮಾಜದ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹ,
ಹಾಗೂ ನಕಲಿ ಜಾತಿ ಪ್ರಮಾಣ ಪತ್ರವನ್ನು ಕೊಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಆಗಲೇಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಾಜ್ಯಾಧ್ಯಕ್ಷರಾದ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!