ಕುಶಾಲನಗರ, ಜು 13: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷರಾಗಿ ಡಾ.ಬಿ.ಎ.ದಿನೇಶ್ ಶೆಟ್ಟಿ ಅವರನ್ನು ಮುಂದುವರೆಸಲಾಗಿದೆ.
ಪಕ್ಷ ಸಂಘಟನೆ ಮತ್ತು ಕ್ರಿಯಾಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಸಂಬಂಧ ಕರವೇ ರಾಜ್ಯಾಧ್ಯಕ್ಷ
ಹೆಚ್.ಶಿವರಾಮೇಗೌಡರ ನೇತೃತ್ವದಲ್ಲಿ
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ ಕೊಡಗು ಜಿಲ್ಲಾಧ್ಯಕ್ಷರಿಗೆ ಮುಂದಿನ ಅವಧಿಗೆ ಮುಂದುವರೆಯಲು ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು.
ಈ ಸಂದರ್ಭ ಕೊಡಗು ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Back to top button
error: Content is protected !!