ಕುಶಾಲನಗರ, ಜು 18: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಾಧಿಕಾರಿಗಳ ಕಛೇರಿ ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಕಾವೇರಿ ನಿಸರ್ಗಧಾನದಲ್ಲಿ ಹಮ್ಮಿಕೊಂಡಿದ್ದ ಕಲಾ ನಡಿಗೆ ಜನರ ಬಳಿಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿದ್ವಾನ್ ಬಿ.ಸಿ.ಶಂಕ್ರಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ನಿವೃತ್ತ ಅಧಿಕಾರಿ ಮಣಜೂರು ಮಂಜುನಾಥ್, ನಿವೃತ್ತ ಪ್ರಾಧ್ಯಾಪಕ ಸಬಲಂ ಭೋಜಣ್ಣ ರೆಡ್ಡಿ ಮತ್ತಿತರರು ಇದ್ದರು.
ಬಿ.ಎಸ್.ಲೋಕೇಶ್ ಸಾಗರ್ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
Back to top button
error: Content is protected !!