ಆರೋಪ

ಶೂ ವಿತರಣೆಯಲ್ಲಿ‌ ಭ್ರಷ್ಟಾಚಾರ ಆರೋಪ: ಕೊಡಗು‌ ಜಿಲ್ಲಾ ಶಿಕ್ಷಣಾಧಿಕಾರಿಗಳ ವಿರುದ್ದ ದೂರು ದಾಖಲು

ಕುಶಾಲನಗರ, ಸೆ 10: ಕರ್ನಾಟಕ ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿರುವ ಶೂಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಶೂ ಬಳಸಿದ ಒಂದೇ ವಾರದಲ್ಲಿ ಹರಿದಿರುವುದು ಅಥವಾ ಶೂ ಹಾಕಿದ ಕೆಲವೇ ನಿಮಿಷಗಳಲ್ಲಿ ಹೊಲಿಗೆ ಕಿತ್ತುಬರುವುದು ಕಂಡುಬಂದಿರುತ್ತದೆ ಎಂದು ವರದಿ ಮಾಡಲಾಗಿತ್ತು. ಇದಲ್ಲದೇ, ಕಳೆದ ವರ್ಷಕ್ಕಿಂತ ಈ ವರ್ಷ ವಿತರಿಸಿರುವ ಶೂಗಳು ಕಳಪೆಯಾಗಿದ್ದು, ಇದರಲ್ಲಿ ಭ್ರಷ್ಟಾಚಾರವೂ ಸಹ ನಡೆದಿರುವ ಆರೋಪ ಮಾಡಲಾಗಿತ್ತು. ಸದರಿ ವಿಷಯವು ಶಾಲಾ ಮಕ್ಕಳ ಮೂಲಭೂತ ಸೌಕರ್ಯ ಒದಗಿಸುವ ವಿಚಾರವಾಗಿ ಇದ್ದು, ಭಾರತ ಸಂವಿಧಾನದ ೨೧ಎ ವಿಧಿಯ ಉಲ್ಲಂಘನೆಯಾಗುತ್ತಿರುವುದು ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ.

ಈ ಮೇಲೆ ಹೇಳಿದ ವಿಚಾರಗಳನ್ನು ಗಮನಿಸಿ, ಗೌರವಾನ್ವಿತ ಉಪಲೋಕಾಯುಕ್ತರು ಜಸ್ಟೀಸ್ ಕೆ.ಎನ್.ಫಣೀಂದ್ರ ರವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಆದೇಶಿಸಿದ್ದು, ಅದರಂತೆ ಉಪಲೋಕಾಯುಕ್ತ-೧ ರವರ ವ್ಯಾಪ್ತಿಯಲ್ಲಿರುವ ೧೫ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಈ ಕೆಳಗೆ ಹೇಳಿದ ದೂರುಗಳನ್ನು ಸಂಬಂಧಪಟ್ಟ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ದಾಖಲು ಮಾಡಲಾಗಿದೆ. ಮುಂದುವರಿದು, ಸದರಿ ವಿಷಯದ ಬಗ್ಗೆ ಆಯಾ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತರವರುಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ಮತ್ತು ದಾಖಲೆಗಳೊಂದಿಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಗೌರವಾನ್ವಿತರಿಂದ ಆದೇಶಿಸಲಾಗಿದ್ದು, ಎರಡು ವಾರಗಳಲ್ಲಿ ಪ್ರಾಥಮಿಕ ವರದಿಯನ್ನು ಸಲ್ಲಿಸಲು ಆದೇಶಿಸಿಸಲಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!