ಧಾರ್ಮಿಕ

ಅ.17ರಂದು ಶನಿವಾರ ಕಾವೇರಿ ತೀರ್ಥೋದ್ಭವ

ಕುಶಾಲನಗರ, ಸೆ 16: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ–2026ರ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ಶ್ರೀ ತಲಕಾವೇರಿ ದೇವಾಲಯಗಳಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟಗೊಂಡಿದೆ.

ಸೆ.27ರಂದು ಬೆಳಗ್ಗೆ 8.45ಕ್ಕೆ ಭಾನುವಾರದಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಲ್ಲುವ ತುಲಾ ಲಗ್ನದಲ್ಲಿ ‘ಪ್ರತ್ಯೇಕ ಅಕ್ಷಿ’ ಕಾರ್ಯಕ್ರಮ ನಡೆಯಲಿದೆ.

ಅ.5ರಂದು ಬೆಳಗ್ಗೆ 10.35ಕ್ಕೆ ಸೋಮವಾರದಂದು ಸಲ್ಲುವ ವೃಷಭ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ.

ಅ.15ರಂದು ಮಧ್ಯಾಹ್ನ 12.35ಕ್ಕೆ ಗುರುವಾರದಂದು ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳಿಗೆ ಪೂಜೆ ನೆರವೇರಿಸಲಾಗುತ್ತದೆ.

ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ

ಕಾವೇರಿ ತುಲಾ ಸಂಕ್ರಮಣದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾದ *ಪವಿತ್ರ ತೀರ್ಥೋದ್ಭವ ಅ.17ರಂದು ತಲಕಾವೇರಿಯಲ್ಲಿ ನಡೆಯಲಿದೆ. ಅಂದು ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!