ಸಾಮಾಜಿಕ

ಭವಾನಿಪುರ್ ಬಾಬಾ ಬದ್ರುದ್ದಿನ್ ಶಾ ವೆಲ್ಫೇರ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ

ಕುಶಾಲನಗರ, ಡಿ 12: ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಹಾಡಿಯ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಹೊದಿಕೆಯೊಂದಿಗೆ ಗುಡಿಸಲಿನಲ್ಲಿ ಶೋಚನೀಯ ಜೀವನ ನಡೆಸುತ್ತಿರುವ ಸುಮಾರು 10 ಆದಿವಾಸಿ ಕುಟುಂಬಗಳಿಗೆ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ನ್ಯೂ ಡೆಲ್ಲಿ ವತಿಯಿಂದ ಉಚಿತವಾಗಿ ನೂತನ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದ್ದು, ತಲಾ ರೂ.5 ಲಕ್ಷ ದ ಚೆಕ್ ಅನ್ನು ಶುಕ್ರವಾರ  ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ನ್ಯೂ ಡೆಲ್ಲಿಯ (ಎನ್.ಜಿ.ಒ) ರಾಷ್ಟ್ರೀಯ ಅಧ್ಯಕ್ಷ ಶಶಿಕುಮಾರ್ ವಿತರಣೆ ಮಾಡಿದರು.

ಕಟ್ಟೆಹಾಡಿಯ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹತ್ತು ಆದಿವಾಸಿಗಳು ವಾಸಿಸುತ್ತಿರುವ ಗುಡಿಸಲುಗಳಿಗೆ ಭೇಟಿ ನೂತನ ಮನೆ ನಿರ್ಮಿಸಲು ಚೆಕ್ ಗಳನ್ನು ನೀಡಲಾಯಿತು. ಈ ಸಂದರ್ಭ ಮಾತನಾಡಿದ, ಎನ್.ಜಿ.ಒ.ರಾಷ್ಟ್ರೀಯ ಅಧ್ಯಕ್ಷ ವೈ.ಕೆ.ಶಶಿಕುಮಾರ್ ,
ಬಡತನ ಮುಕ್ತ ಭಾರತ ಮಾಡಬೇಕು ಎಂಬ ಉದ್ದೇವನ್ನು ನಮ್ಮ ಸಂಸ್ಥೆ ಹೊಂದಿದೆ. ಪ್ರತಿ ಮನೆಗೆ ಆರೋಗ್ಯ ಹಾಗೂ ಆರ್ಥಿಕ ನೆರವಿನಿಂದ ಬಡತನ ನಿರ್ಮೂಲನೆ, ಪ್ರತಿಯೊಂದು ಕುಟುಂಬಕ್ಕೆ ಆತ್ಮಶಕ್ತಿ,ಪ್ರತಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ.
ಎನ್.ಜಿ.ಒ ಯೊಂದಿಗೆ ಕೈ ಜೋಡಿಸಿ ಆರೋಗ್ಯ ಅವಕಾಶ ಮತ್ತು ಆತ್ಮ ವಿಶ್ವಾಸ ಮೇಲೆ ಆಧಾರಿತ ಭವಿಷ್ಯವನ್ನು ನಿರ್ಮಿಸೋಣ ಸಹಕಾರ ನೀಡಬೇಕು ಎಂದರು.
ನಮ್ಮ ಎನ್.ಜಿ.ಒ ವತಿಯಿಂದ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದ್ದು,ಸದಸ್ಯರಾದವರಿಗೆ
ಜೀವವಿಮೆ ಸೌಲಭ್ಯ, ಹೆಣ್ಣು ಮಕ್ಕಳ ಮದುವೆಗೆ ಸಹಾಯಧನ, ಅಂಗವಿಕಲರಿಗೆ, ವೃದ್ಧರಿಗೆ ಸಹಾಯಧನ ಹಾಗೂ ಶವಸಂಸ್ಕಾರಕ್ಕೆ ನೆರವು ಸೇರಿದಂತೆ ಸ್ವಯಂ ಉದ್ಯೋಗ ಕೈಗೊಂಡು ಸಬಲೀಕರಣ ಹೊಂದಲು ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ಎನ್.ಜಿ.ಒ.ಸಂಸ್ಥೆಯ ಸಂಚಾಲಕಿ ಫ್ರಾನ್ಸಿನ ಮೇರಿ ಮಾತನಾಡಿ, ನಮ್ಮ ನಡೆ ಬಡತನ ನಿರ್ಮೂಲನೆ ಕಡೆಗೆ ಎಂಬುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ.ಎಂಟು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಸಂಸ್ಥೆ ಸರ್ವೇ ಮಾಡಿ ಸರ್ಕಾರದ ಸೌಲಭ್ಯಗಳಿಂದ ವಂಚಿತ ಕುಟುಂಬಗಳನ್ನು ಗುರುತಿಸಿ ಅಗತ್ಯ ನೆರವು ನೀಡಲಾಗುತ್ತದೆ ಎಂದರು.
ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯರು ಆದ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ನ್ಯೂ ಡೆಲ್ಲಿ ಕೊಡಗು ಘಟಕದ ಜಿಲ್ಲಾಧ್ಯಕ್ಷ ಆರ್.ಕೆ.ಚಂದ್ರು ಮಾತನಾಡಿ, ಆದಿವಾಸಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದರು.ಅವು ಅರ್ಹ ಗಿರಿಜನ ಕುಟುಂಬಗಳಿಗೆ ತಲುಪುತ್ತಿಲ್ಲ. ಬಹುತೇಕ ಯೋಜನೆಗಳು ಗಿರಿಜನರ ಹೆಸರಿನಲ್ಲಿ ಉಳ್ಳವರ ಪಲಾಗುತ್ತಿವೆ. ಸರ್ಕಾರದ ಯೋಜನೆಗಳಿಂದ ನೂರಾರು ಗಿರಿಜನರು,ಆದಿವಾಸಿ ಜೇನುಕುರುಬ ಕುಟುಂಬಗಳು ವಂಚಿತಗೊಂಡಿವೆ.ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ನ್ಯೂ ಡೆಲ್ಲಿ ವತಿಯಿಂದ ಉಚಿತವಾಗಿ ಮನೆ ನಿರ್ಮಿಸಿಕೊಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾಗಿದೆ. ಎನ್.ಜಿ.ಒ.ಸೇವೆ ಇದೇ ರೀತಿ ಮುಂದುವರೆಯಲಿ ಇದರಿಂದ ಅನೇಕ ಆದಿವಾಸಿ ಕುಟುಂಬಗಳಿಗೆ ನೆರವು ಸಿಗಲಿ ಎಂದು ಹೇಳಿ ಸಂಸ್ಥೆಯ ಅಧ್ಯಕ್ಷ ಶಶಿಕುಮಾರ್ ಅವರ ಸೇವೆಯನ್ನು ಶ್ಲಾಘಿಸಿದರು.
ಈ ಸಂದರ್ಭ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ನ್ಯೂ ಡೆಲ್ಲಿ ಪದಾಧಿಕಾರಿಗಳಾದ ಬಿಂದು
ಸತೀಶ್ ಹಾಗೂ ಫಲಾನುಭವಿಗಳಾದ ಲಕ್ಷ್ಮಿ, ಗೌರಿ,ಸುಮಿತ್ರ,ರಾಧ,ಗೀತಾ,ಸಣ್ಣಮ್ಮ,ಮುತ್ತಮ್ಮ,ಶಿವಣ್ಣ ಹಾಗೂ ಹಾಡಿ ಮುಖಂಡರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!