ಕುಶಾಲನಗರ, ಜು 18: ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕುಶಾಲನಗರಕ್ಕೆ ಭೇಟಿ ನೀಡಿದ್ದರು.
ಕುಶಾಲನಗರ ತಹಸೀಲ್ದಾರ್ ಕಛೇರಿ, ತಾಲೂಕು ಕಛೇರಿಗಳಿಗೆ ದಿಢೀರ್ ಭೇಟಿ ನೀಡಿದ ಅವರು ಭೂ ದಾಖಲೆಗಳಿಗೆ ಸಂಬಂಧಪಟ್ಟಂತೆ ನೆಮ್ಮದಿ ಕೇಂದ್ರ, ಆಧಾರ್ ದಾಖಲಾತಿ ವಿಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ನಂತರ ಗುಂಡುರಾವ್ ಬಡಾವಣೆಯಲ್ಲಿ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಾದಿರಿಸಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ತಹಸೀಲ್ದಾರ್ ಟಿ.ಎಂ.ಪ್ರಕಾಶ್, ಉಪ ತಹಸೀಲ್ದಾರ್ ಮಧುಸೂದನ್ ಮತ್ತಿತರರು ಇದ್ದರು.
Back to top button
error: Content is protected !!