ಟ್ರೆಂಡಿಂಗ್

ಮತದಾರರ ಜಾಗೃತಿ ರಂಗೋಲಿ ಸ್ಪರ್ಧೆ

ಸೋಮವಾರಪೇಟೆ, ಮಾ 30: ಲೋಕಸಭಾ ಚನಾವಣೆಯ ಹಿನ್ನಲೆಯಲ್ಲಿ ಮತದಾರರ ಜಾಗೃತಿ ರಂಗೋಲಿ ಸ್ಪರ್ಧೆ ಪಟ್ಟಣದ ಖಾಸಗಿ,ಕೆ.ಎಸ್.ಆರ್.ಸಿ.ಮತ್ತು ಪಟ್ಟಣ ಪಂಚಾಯಿತಿ ಆವರಣದಲ್ಲಿ ನಡೆಯಿತು.
ಇಲ್ಲಿನ ಪಟ್ಟಣ ಪಂಚಾಯ್ತಿ ವತಿಯಿಂದ ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕದಲ್ಲಿ ಏಪ್ರಿಲ್ 26ಹಾಗೂ ಮೆ 7ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ನಡೆಸಲಾಯಿತು.ಸ್ಪರ್ದೆಯಲ್ಲಿ ಸಾಕಷ್ಟು ಮಹಿಳೆಯರು ಆಸಕ್ತಿಯಿಂದ ಭಾಗವಹಿಸಿ ಚುನಾವಣೆ ಸಂಬಂದಿಸಿದ ರಂಗೋಲಿ ಹಾಗೂ ಘೋಷವಾಕ್ಯಗಳನ್ನು ಬರೆದರು.
ಈ ಸಂದರ್ಭ ಪಟ್ಟಣ ಪಂಚಾಯ್ತಿ ಆಡಳಿತಾ ಧಿಕಾರಿ ಹಾಗೂ ತಹಶೀಲ್ದಾರ್ ನವೀನ್ ಕುಮಾರ್, ಮುಖ್ಯಾ ಧಿಕಾರಿ ಲೋಕ್ಯ ನಾಯಕ್,ಆರೋಗ್ಯ ನಿರೀಕ್ಷಕ ಜಾಸಿಂಖಾನ್,ಸಿಬ್ಬಂದಿಗಳಾದ,ರೂಪ,ವನಿತಾ, ಹೊನಲಾ ದೇವಿ,ಆದಿಲ್ಪಾಶಾ ಹಾಗೂ ಮುಂತಾದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!