ಕುಶಾಲನಗರ, ನ 27:ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿಸೆಂಬರ್ 1 ಮತ್ತು 2 ರಂದು 40ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಉಪಾಧ್ಯಕ್ಷ ನವನೀತ್ ಪೊನ್ನೇಟಿ ಹಾಗೂ ಕಾರ್ಯದರ್ಶಿ ಕೆ.ವಿ.ಅನುದೀಪ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಿಸೆಂಬರ್ 1ರಂದು ರಥ ಬೀದಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪವನಾಮ ಹೋಮ, ಧ್ವಜಾರೋಹಣ ಮತ್ತು ಮಹಾಪೂಜೆ ನಡೆಯಲಿದೆ. 2 ರಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನ ಪ್ರಸಾದ ಸಂತರ್ಪಣೆ ನೆರವೇರಿಸಲಾಗುವುದು.
ಅಂದು ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಬೈಚನಹಳ್ಳಿ ಮಾರಮ್ಮ ದೇವಾಲಯದ ತನಕ ಸಾಗಲಿದೆ. ಅಂದು ಮಧ್ಯಾಹ್ನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಕೊಡಗಿನ ವಿವಿಧೆಡೆಗಳಿಂದ ಸೇರಿದಂತೆ ನೆರೆಯ ಮೈಸೂರು, ಹಾಸನ ಜಿಲ್ಲೆಗಳಿಂದ ಸುಮಾರು 20 ರಿಂದ 25 ಸಾವಿರ ಮಂದಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಸಮಸ್ತ ಹಿಂದೂ ಬಾಂಧವರು ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದರು.
ಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಪ್ರವೀಣ್ ಓಂಕಾರ್, ಖಜಾಂಚಿ ಚಂದ್ರಶೇಖರ್ , ಉಪಾಧ್ಯಕ್ಷ ವಿನು ಟಿ, ಖಜಾಂಚಿ ಕೆ.ಎನ್.ಚಂದ್ರಶೇಖರ್, ಸಹ ಕಾರ್ಯದರ್ಶಿ ಶರತ್ , ಸಂಚಾಲಕ ಹರೀಶ್ ಎಲ್ ಇದ್ದರು.
Back to top button
error: Content is protected !!