ಕುಶಾಲನಗರ, ಜು 20: ತೊರೆನೂರಿನಲ್ಲಿ ಅಳವಡಿಸಿರುವ ಅವೈಜ್ಞಾನಿಕ ಟ್ರಾನ್ಸ್ ಫಾರ್ಮರ್ ತೆರವುಗೊಳಿಸುವಂತೆ ಆಗ್ರಹಿಸಿ ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಪ್ರಮುಖರು ಚೆಸ್ಕಾಂ ಗೆ ಮನವಿ ಸಲ್ಲಿಸಿದರು.
ಸಂಘದ ಗೋದಾಮು ಮುಂಭಾಗ ಅಳವಡಿಸಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಅಪಾಯಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜಾನುವಾರುಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿವೆ. ಗ್ರಾಮದ ಬಸವೇಶ್ವರ ದೇವಾಲಯ ಮತ್ತು ಸಮುದಾಯ ಭವನ ವ್ಯಾಪ್ತಿಯ ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗಿದೆ. ಈ ಬಗ್ಗೆ ಕಳೆದ 5 ವರ್ಷಗಳಿಂದ ಇಲಾಖೆ ಗಮನಕ್ಕೆ ತಂದರೂ ನಿರ್ಲಕ್ಯ ವಹಿಸಲಾಗುತ್ತಿದೆ ಎಂದು ಸಹಕಾರ ಸಂಘದ ಮಾಜಿ ಅಧ್ಯಕ್ಷರೂ ಆದ ನಿರ್ದೇಶಕ ಕೆ.ಎಸ್.ಕೃಷ್ಣೇಗೌಡ ಮತ್ತು ನಿರ್ದೇಶಕ ಟಿ.ಕೆ.ಪಾಂಡುರಂಗ ಆಕ್ರೋಷ ವ್ಯಕ್ತಪಡಿಸಿದರು. ಮುಂದಿನ ಒಂದು ವಾರದ ಒಳಗಾಗಿ ಈ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಚೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಈ ಬಗ್ಗೆ ಕೂಡಲೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಚೆಸ್ಕಾಂ ಅಧಿಕಾರಿಗಳಾದ ಗೀತಾ, ರಾಣಿ ತಿಳಿಸಿದರು.
ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ ಕುಶಾಲಪ್ಪ, ನಿರ್ದೇಶಕ ಪ್ರೇಮ್ ಕುಮಾರ್ ಇದ್ದರು.
Back to top button
error: Content is protected !!