ಕುಶಾಲನಗರ, ಜು 26:ಹಿಂದು ಜಾಗರಣ ವೇದಿಕೆ ಹಾಗೂ ಮಾಜಿ ಸೈನಿಕರ ಸಂಘದ ಸಹಭಾಗಿತ್ವದಲ್ಲಿ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ನಡೆಯಿತು.ನಿವೃತ್ತ ಸೇನಾಧಿಕಾರಿಗಳಾದ ಚೋಂಡಿರ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರು ಹಾಗೂ ನಿಕಟ ಪೂರ್ವ ಪ್ರಾಂತ ಸಂಘಟನಾ ಕಾರ್ಯದರ್ಶಿ ಎಬಿವಿಪಿ ಬೆಂಗಳೂರು. ಜಯಪ್ರಕಾಶ್ ರವರು ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಹಿಂದು ಜಾಗರಣ ವೇದಿಕೆ, ವಿ.ಹೆಚ್.ಪಿ., ಭಾ.ಜ.ಪಾ. ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಾಜಿ ಸೈನಿಕ ಸಂಘ ಪದಾಧಿಕಾರಿಗಳು ಭಾಗವಹಿಸಿದ್ದರು. ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ನಡೆದ ರಕ್ತದಾನ ಶಿಬಿರದಲ್ಲಿ 50 ಕಾರ್ಯಕರ್ತರು ರಕ್ತದಾನ ಮಾಡಿದರು.
Back to top button
error: Content is protected !!