ಕಾರ್ಯಕ್ರಮ

ಹುಲುಸೆ ಪ್ರಾಥಮಿಕ ಶಾಲೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ

ಕುಶಾಲನಗರ, ಫೆ. 4: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿದರು.
ಶಾಲಾಭಿವೃದ್ಧಿ ಸಮಿತಿ ಮನವಿಯ ಮೇರೆಗೆ ಶಾಲೆಯ ಪ್ರಮುಖ ಬೇಡಿಕೆಯಾದ ಶಾಲೆಯ ತಡೆಗೋಡೆ ಮತ್ತು ಶಾಲಾ ಆವರಣದಲ್ಲಿರುವ ವೇದಿಕೆಯ ಸಭಾಂಗಣದ ದುರಸ್ತಿಗೆ ಅಗತ್ಯ ಅನುದಾನ ನೀಡುವುದಾಗಿ ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ. ಪಿ. ಸಿ.ಸಿ. ಸದಸ್ಯ ನಟೇಶ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ರಾಜಶೇಖರ್, ಹೆಚ್. ಎಸ್ ಮಂಜುನಾಥ್, ಹೆಬ್ಬಾಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲತಾ, ಸದಸ್ಯ ಹೆಚ್. ಸಿ. ಮಹದೇವ, ಶಾಲಾ ಮುಖ್ಯೋಪಾಧ್ಯಾಯನಿ ರೇಖಾ, ಸಹ ಶಿಕ್ಷಕ ಹೆಚ್.ಎಸ್ ದೇವರಾಜ್‌, ಸಮಿತಿ ಸದಸ್ಯ ರಾಜು, ಮುಖಂಡ ರಂಜನ್ ಹೆಬ್ಬಾಲೆ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!