ಚುನಾವಣೆ

ದೆಹಲಿ ಚುನಾವಣೆ: ಕುಶಾಲನಗರದಲ್ಲಿ ಬಿಜೆಪಿ ವಿಜಯೋತ್ಸವ

ಕುಶಾಲನಗರ, ಫೆ 08: ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ವಿಜಯದ ಹಿನ್ನೆಲೆಯಲ್ಲಿ ಕುಶಾಲನಗರದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಕುಶಾಲನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಜಯಕಾರ ಮೊಳಗಿಸಿದ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ‌ ಸಿಹಿ‌ ಹಂಚಿ ಸಂಭ್ರಮ
ವ್ಯಕ್ತಪಡಿಸಿದರು.
ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಚರಣ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಮಂಡಲ ಅಧ್ಯಕ್ಷ ಗೌತಮ್, ಯುವ ಮೋರ್ಚಾ ನಗರ ಕಾರ್ಯದರ್ಶಿ ಸಚಿನ್, ಆದರ್ಶ್,
ಪ್ರಮುಖರಾದ ಚಂದ್ರು, ಉಮಾಶಂಕರ್, ಕುಮಾರಪ್ಪ, ಪ್ರವೀಣ್, ಗಣಪತಿ, ಡಿ.ಕೆ.ತಿಮ್ಮಪ್ಪ, ಚಂದ್ರಶೇಖರ್ ಹೇರೂರು, ಜಿ.ಎಲ್.ನಾಗರಾಜು, ನಾಣಿ, ನಾರಾಯಣ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!