ಕುಶಾಲನಗರ, ಜ. 7: ಕಾರ್ಮಿಕ ಇಲಾಖೆ, ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಿಟ್ ಗಳ ವಿತರಣೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ನವರು ಕೂಡಿಗೆ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ವಿತರಣೆ ಮಾಡಿದರು..
ನಂತರ ಮಾತನಾಡುತ್ತಾ ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ,ಅಲ್ಲದೇ ಇಲಾಖೆಯ ಮುಖೇನ ವಿವಿಧ ಹಂತಗಳಲ್ಲಿ ಕಾರ್ಮಿಕರ ಉಚಿತ ಪರಿಕರಗಳ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಅದರ ಸದುಪಯೋಗ ವನ್ನು ಕಾರ್ಮಿಕರು ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಪರಮೇಶ್, ಕುಶಾಲನಗರ ಕುಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯ ಮಂಜುನಾಥ ಗುಂಡೂರಾವ್, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ. ಕಾವೇರಿ, ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ, ಸೋಮವಾರಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಶಶಿಧರ್, ವಿರಾಜಪೇಟೆ ವೃತ ನಿರೀಕ್ಷಕ ನಿಖಿಲ್ ಚಂದ್ರ, ಎಕ್ಸಿಕ್ಯುಟಿವ್ ಕೆ.ಎಸ್. ಪ್ರಸನ್ನ ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು, ಹಾಗೂ ಕಟ್ಟಡ ಕಾರ್ಮಿಕರು ಹಾಜರಿದ್ದರು.
Back to top button
error: Content is protected !!