ಕುಶಾಲನಗರ, ಫೆ 27: ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಬಳಕೆ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಗಂಗಾಧರಪ್ಪ.ಆರ್.ವಿ. ಡಿಎಸ್ ಪಿ, ಸೋಮವಾರಪೇಟೆ ಉಪವಿಭಾಗ, ಪ್ರಕಾಶ್.ಬಿ.ಜಿ, ಪಿಐ ಹಾಗೂ ಗೀತಾ, ಪಿಎಸ್ಐ, ಕುಶಾಲನಗರ ಟೌನ್ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ. ದಿನಾಂಕ: 25-02-2025 ರಂದು ಬೈಚನಹಳ್ಳಿಯ ಜಾತ್ರೆ ಮೈದಾನದ ಸಮೀಪದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್, (34 ವರ್ಷ) ಮತ್ತು ರಾಧಕೃಷ್ಣ ಬಡಾವಣೆ ನಿವಾಸಿ ದರ್ಶನ್, (21 ವರ್ಷ) ಎಂಬುವವರನ್ನು 25 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ದಿನಾಂಕ: 26-02-2025 ರಂದು ಬೈಚನಹಳ್ಳಿಯ ರೈತ ಸಹಕಾರ ಭವನದ ಸಮೀಪ ನಿಷೇಧಿತ ಮಾದಕ ವಸ್ತುವನ್ನು ಬಳಕೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ. ಬೈಚನಹಳ್ಳಿ ನಿವಾಸಿಗಳಾದ ರವಿಕುಮಾರ್, (22 ವರ್ಷ), ನಿಖಿಲ್ ಕುಮಾರ್, (24 ವರ್ಷ) ಮತ್ತು ಯೋಗಾನಂದ ಬಡಾವಣೆ ನಿವಾಸಿ ಶರತ್ ನಾಯಕ್, (25 ವರ್ಷ) ಎಂಬುವವರನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
Back to top button
error: Content is protected !!