ಚುನಾವಣೆ

ಹರದೂರು ಗ್ರಾ.ಪಂ ಉಪಾಧ್ಯಕ್ಷರ ಚುನಾವಣೆ: ಅವಿರೋಧ ಆಯ್ಕೆಯಾದ ಎಂ.ಎ.ಮುಸ್ತಫಾ

ಕುಶಾಲನಗರ,ಏ೩: ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಹರದೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಎಂ.ಎ.ಮುಸ್ತಫಾರವರು ಅವಿರೋಧ ಆಯ್ಕೆಯಾದರು.
ಗುರುವಾರ ಹರದೂರು ಗ್ರಾ.ಪಂ ನಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಎಂ.ಎ.ಮುಸ್ತಫಾರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಎ.ಮುಸ್ತಫಾರವರು ಮಾತ್ರ ನಾಮಪತ್ರ ಸಲ್ಲಸಿದ ಹಿನ್ನಲೆ ಎಂ.ಎ.ಮುಸ್ತಫಾರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭ ಮಾತನಾಡಿದ ನೂತನ ಉಪಾಧ್ಯಕ್ಷ ಎಂ.ಎ.ಮುಸ್ತಫಾ, ಸರ್ವ ಸದಸ್ಯರ ಬೆಂಬಲದೊಂದಿಗೆ ಹರದೂರು ಗ್ರಾ.ಪಂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ.‌ ಮುಂದಿನ ದಿನಗಳಲ್ಲಿಯೂ ಎಲ್ಲಾ ಸದಸ್ಯರ ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದುಕೊಂಡು ಪಂಚಾಯಿತಿ ಅಭಿವೃದ್ಧಿಗಾಗಿ ಶ್ರಮವಹಿಸುತ್ತೇನೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದೇಗೌಡರವರು ಚುನಾವಣೆಯನ್ನು ನಡೆಸಿಕೊಟ್ಟರು. ಕುಶಾಲನಗರದ ಗೆಳೆಯರ ಬಳಗದ ಸದಸ್ಯರು, ಸ್ಥಳೀಯ ಸಾರ್ವಜನಿಕರು ನೂತನವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಎ.ಮುಸ್ತಫಾರವರಿಗೆ ಶುಭಾಶಯ ತಿಳಿಸಿದರು.
ಈ ಸಂದರ್ಭ ಹರದೂರು ಗ್ರಾ.ಪಂ ಅಧ್ಯಕ್ಷರಾದ ಎ.ಎ.ಬೋಜಮ್ಮ, ಕೆ.ಕೆ.ರಮೇಶ್, ಕುಸುಮ, ಸರೋಜ, ಎಸ್.ಕೆ.ಅಬ್ದುಲ್ ಸಲಾಂ, ಬಿ.ಡಿ.ಪದ್ಮನಾಭ, ಸುಬ್ಬಯ್ಯ, ಪಿಡಿಓ ಪೂರ್ಣಿಮ, ಸಿಬ್ಬಂದಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!