ಪ್ರಕಟಣೆ

25 ರಿಂದ 27 ರವರೆಗೆ ಕೊಡಗು ಜಿಲ್ಲಾ ಮಟ್ಟದ ಪ್ರಥಮ ವರ್ಷದ ಕ್ರೀಡೋತ್ಸವ

ಕುಶಾಲನಗರ, ಏ 23 : ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ,ಒಕ್ಕಲಿಗರ ಯುವ ವೇದಿಕೆ, ಕುಶಾಲನಗರ ತಾಲ್ಲೂಕು ಹಾಗೂ ಒಕ್ಕಲಿಗರ ರಿಕ್ರಿಯೇಶನ್ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಏ.25 ರಿಂದ 27 ರ ವರೆಗೆ ಕೊಡಗು ಜಿಲ್ಲಾ ಮಟ್ಟದ ಪ್ರಥಮ ವರ್ಷದ ಕ್ರೀಡೋತ್ಸವ ಆಯೋಜಿಸಲಾಗಿದೆ ಎಂದು ಒಕ್ಕಲಿಗಗೌಡ ಯುವ ವೇದಿಕೆ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ ಹೇಳಿದರು.

ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ಕ್ರೀಡೋತ್ಸವದಲ್ಲಿ ಪುರುಷರ ವಾಲಿಬಾಲ್, ಮಹಿಳೆಯರ ಥ್ರೋಬಾಲ್,
ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ,ಮಹಿಳೆಯರಿಗೆ ಮತ್ತು ಪುರುಷರಿಗೆ ಶಾಟ್‌ಪುಟ್‌,ವಯಸ್ಕರಿಗೆ ಹಾಗೂ
ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆಯಲಿವೆ. ಶಾಸಕ ಡಾ.ಮಂತರ್ ಗೌಡ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಸಮಾಜದ ಮುಖಂಡರು ಹಾಗೂ ವೇದಿಕೆ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಎಲ್ಲಾ ಕ್ರೀಡಾಭಿಮಾನಿಗಳು ಕುಟುಂಬ ಸಮೇತರಾಗಿ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೃಷ್ಣಪ್ಪ ಮನವಿ ಮಾಡಿದ್ದಾರೆ.
ಏ.27 ರಂದು ತಾಲ್ಲೂಕು ಯುವ ಒಕ್ಕಲಿಗರ ವೇದಿಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಮಠ ಕೊಡಗು, ಹಾಸನ ಶಾಖಾ‌ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಅವರು ನೂತನ ಯುವ ವೇದಿಕೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us