ಸಭೆ

ಪ್ರಶಿಕ್ಷಣಾರ್ಥಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮ: ಸಂವಾದ

ಕುಶಾಲನಗರ: ಜೂ 07: ಮೈಸೂರಿನ ಅಬ್ದುಲ್ ನಝೀರ್ ಸಾಬ್ ತರಬೇತಿ ಸಂಸ್ಥೆಯಲ್ಲಿ ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಚೇತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಲೆಕ್ಕ ಸಹಾಯಕರಿಗೆ ನಡೆಯುತ್ತಿರುವ ತರಬೇತಿಯ ಭಾಗವಾಗಿ, ಪ್ರಶಿಕ್ಷಣಾರ್ಥಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಗ್ರಾಮ ಪಂಚಾಯಿತಿ ಕೈಗೊಳ್ಳುತ್ತಿರುವ ವಿನೂತನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಎಮ್. ಆರ್. ರವರ ಜೊತೆಗೆ ಪ್ರಶಿಕ್ಷಣಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಸದಸ್ಯರಾದ ಗಂಗಮ್ಮ, ಉಮಾ, ಪಂಚಾಯತ್ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ವತಿಯಿಂದ ಬೋಧಕರಾದ ಪ್ರಶಾಂತ್ ಹಾಗೂ ನೀಲಪ್ಪ ಕಜ್ಜರಿ ರವರು ಆಗಮಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!