ಅಪಘಾತ

ಓವರ್ ಟೇಕ್ ಭರದಲ್ಲಿ ಬೈಕ್ ಗೆ ಕಾರ್ ಡಿಕ್ಕಿ: ಬೈಕ್ ಸವಾರ ಸಾವು

ಕುಶಾಲನಗರ, ಆ 02:ಕುಶಾಲನಗರ-ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಇನ್ಫೋಸಿಸ್ ಉದ್ಯೋಗಿ ಸುಳ್ಯದ ಪೆರಾಜೆಯ ಎ. ಕಾರ್ತಿಕ್ ಭಟ್ (30) ಮೃತ ದುರ್ದೈವಿ.

ಮಡಿಕೇರಿಯಿಂದ ಕುಶಾಲನಗರದತ್ತ ಬರುತ್ತಿದ್ದ ಕಾರು ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಕುಶಾಲನಗರ ಆಸ್ಪತ್ರೆಗೆ ರವಾನಿಸಿದರೂ ಕೊನೆಯುಸಿರೆಳೆದಿದ್ದಾನೆ.

ಡಿಕ್ಕಿ ಹೊಡೆದ ಬಳಿಕ ಕಾರು ರಸ್ತೆ ಬದಿಗೆ ವಾಲಿಕೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಉಳಿದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಕುಶಾಲನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!