ಕಾರ್ಯಕ್ರಮ

ಶಿರಂಗಾಲದಲ್ಲಿ ನಡೆದ ಜನ ಸುರಕ್ಷಾ ಆಂದೋಲನ

ಕುಶಾಲನಗರ, ಆ 25: ಶಿರಂಗಾಲದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮವು ನಡೆಯಿತು.
ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಿರಂಗಾಲ .ಕೆನರಾ ಬ್ಯಾಂಕ್ ಹೆಬ್ಬಾಲೆ ಇವರ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ
ಕಾರ್ಯಕ್ರಮವನ್ನು ಶಿರಂಗಾಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು.
ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 20.0000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು.
ಹಾಗೂ ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ ಮಾಡಿಸಿಕೊಂಡಲ್ಲಿ 400000/-ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.ಅಲ್ಲದೆ 60ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು.
ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಶ್ರೀ ಹರೀಶ್ ಸಿ ಜಿ ರವರು ತಿಳಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೇಮಲತಾ ಮಾತನಾಡಿ ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತ ವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!