ಕುಶಾಲನಗರ, ನ 06: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು.
ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು.
ಉದ್ಯಮಿ ಅಯ್ಯಪ್ಪ ಭಾವನಾ ಮತ್ತು ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು.
ಈ ವೇಳೆ ಮಾತನಾಡಿದ ಭಾವನಾ, ಕಾವೇರಿ ನದಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ.
ಜನರಿಗೆ ಕಾವೇರಿ ಬಗ್ಗೆ ಪೂಜ್ಯ ಭಾವನೆ ಬರಬೇಕು. ನದಿಗೆ ಕಲುಷಿತ ನೀರನ್ನು ಹರಿಸಬಾರದು ಎಂಬ ಅರಿವು ಜನರಲ್ಲಿ ಬಂದಲ್ಲಿ ಮಾತ್ರ ಕಾವೇರಿ ಅಪವಿತ್ರವಾಗುವುದನ್ನು ತಪ್ಪಿಸಬಹುದು. ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ.
ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನವಾಗುತ್ತಿದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ರಾಜರಾಜೇಶ್ವರಿ ಚಂದ್ರು, ರುದ್ರ, ವಿನಯ್, ಚಂದ್ರು, ಮಂಜು, ಪ್ರಸಾದ್, ಬಸವೇಗೌಡ, ಚಂದ್ರು ಸೇರಿದಂತೆ ಮತ್ತಿತರರು ಹಾಜರಿದ್ದರು.
Back to top button
error: Content is protected !!