ಕುಶಾಲನಗರ:(ನ16)ಶನಿವಾರ ಸಂಜೆ ಸುಮಾರು 5ಕ್ಕೂ ಹೆಚ್ಚು ಬಸ್ಸಿನಲ್ಲಿ ಬಂದ ಕೇರಳದ ಪ್ರವಾಸಿಗರು ನಿಸರ್ಗ ಧಾಮ ಬಳಿ ಡಿಜೆ ಹಾಕಿ ಶಬ್ದ ಮಾಲಿನ್ಯ ಮಾಡುತ್ತಿದನ್ನು ಗಮನಿಸಿದ ಸ್ಥಳೀಯರು ವಿಚಾರಿಸಲು ಹೋದಾಗ ಅವರನ್ನು ಲೆಕ್ಕಿಸದೆ ಕನ್ನಡಿಗರ ಮೇಲೆ ವ್ಯಂಗ್ಯವಾಗಿ ಮಾತನಾಡಿದ್ದಾರೆ.
ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ.ಆದರೆ ಹೊರಗಿನಿಂದ ಬರುವ ಪ್ರವಾಸಿಗರು ನಿಯಮ ಪಾಲನೆ ಮಾಡುತ್ತಿಲ್ಲ.ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇವರುಗಳ ಮೇಲೆ ಕ್ರಮ ಕೈಗೊಳ್ಳಬೇಕು.
ಇಲ್ಲದಿದ್ದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಾಗರ್ ತೊರೆನೂರು ತಿಳಿಸಿದ್ದಾರೆ.
Back to top button
error: Content is protected !!