ಕುಶಾಲನಗರ, ಜ 15: ಕುಶಾಲನಗರದ ಎಪಿಸಿಎಂಎಸ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಎಂ.ಎನ್.ಕೊಮಾರಪ್ಪ ಅವರ ನಿಧನಾರ್ಥ ಕುಶಾಲನಗರ ಪಟ್ಟಣವೂ ಸೇರಿದಂತೆ ಸುತ್ತಲಿನ ನೂರಾರು ಮಂದಿ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಅವರ ಜೀವನ ಹಾಗೂ ಸಾಧನೆಗಳ ಕುರಿತು ನುಡಿನಮನಗಳೊಂದಿಗೆ ಶ್ರದ್ದಾಂಜಲಿ ಸಲ್ಲಿಸಿದರು.
ಕೊಮಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದೀಪ ಬೆಳಗಲಾಯಿತು.
ಕಲುಷಿತಗೊಳ್ಳುತ್ತಿರುವ ಸಾಮಾಜಿಕ, ರಾಜಕೀಯ ಹಾಗೂ ಸಹಕಾರ ರಂಗದಲ್ಲಿ ಅತ್ಯಂತ ಪ್ರಾಮಾಣಿಕತೆಯ ದರ್ಶನದ ಮೂಲಕ ಎಪಿಸಿಎಂಎಸ್ ಸಹಕಾರ ಸಂಸ್ಥೆಗಳನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಅವರ ಸಹಕಾರ ಕ್ಷೇತ್ರದಲ್ಲಿನ ಆದರ್ಶಮಯ ಆಡಳಿತ ಇತರೇ ಎಲ್ಲಾ ಸಹಕಾರಿ ಗಳಿಗೆ ಮಾದರಿ ಎಂದು ಕುಶಾಲನಗರ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.
ಕುಶಾಲನಗರ ಪಟ್ಟಣದಲ್ಲಿ ರೈತ ಸಹಕಾರ ಭವನವನ್ನು ಅತ್ಯಂತ ಯೋಜನಾ ಬದ್ಧವಾಗಿ ರೂಪಿಸಿದ ಕೊಮಾರಪ್ಪ ಕುಶಾಲನಗರದ ಅಭಿವೃದ್ದಿಗೆ ತಮ್ಮದೇ ಆದ ರೀತಿಯಲ್ಲಿ ಕನಸು ಕಟ್ಟಿದ್ದರು ಶ್ಲಾಘಿಸಿದರು.
ಕುಶಾಲನಗರದಲ್ಲಿ ಸಹಕಾರ ಕ್ಷೇತ್ರವನ್ನು ಪ್ರಾಮಾಣಿಕತೆ ಯಿಂದ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಇತರೆಲ್ಲಾ ಕಿರಿಯ ಸಹಕಾರಿಗಳಿಗೆ ಆದರ್ಶ ಪ್ರಾಯ ಎಂದು ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್ ಬಣ್ಣಿಸಿದರು.
ಎಪಿಸಿಎಂಎಸ್ ಸಂಸ್ಥೆ ಯನ್ನು ಮಾದರಿ ಸಂಸ್ಥೆಯಾಗಿ ರೂಪಿಸುವಲ್ಲಿ ಕೊಮಾರಪ್ಪ ಅವರ ಶ್ರಮ ಅಪಾರ.
ಅವರಲ್ಲಿದ್ದ ಪ್ರಾಮಾಣಿಕತೆ ಹಾಗೂ ಬದ್ಧತೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಲ್ಲಿ ಮೊಳಕೆಯೊಡೆಯಲಿ ಎಂದು ನಗರದ ಹಿರಿಯರಾದ ವಿ.ಎನ್.ವಸಂತ ಕುಮಾರ್ ಆಶಿಸಿದರು.
ಸಹಕಾರ ಕ್ಷೇತ್ರದಲ್ಲಿ ತೋರಿದ ಬದ್ಧತೆ ಹಾಗೂ ಕಾರ್ಯತ್ಪರತೆ ಭಾರತೀಯ ಜನತಾ ಪಕ್ಷದಲ್ಲಿಯೂ ಕೊಮಾರಪ್ಪ ಮೂಡಿಸಿದ್ದರು ಎಂದು ಹಿಂದೂ ವಾದಿ ಜಿ.ಎಲ್.ನಾಗರಾಜು ಹೇಳಿದರು.
ಸಂಸ್ಥೆಯ ಅಧ್ಯಕ್ಷರಾದ ಕೊಮಾರಪ್ಪ ಅವರು ಹೇಳಿದ ಕೆಲಸಗಳು ಸಕಾಲದಲ್ಲಿ ಆಗಲೇ ಬೇಕಿತ್ತು.
ಅವರ 40 ವರ್ಷಗಳ ಸುಧೀರ್ಘ ಆಡಳಿತಾವಧಿಯಲ್ಲಿ ಯಾವತ್ತೂ ಕೂಡ ಯಾವ ಭತ್ಯೆಯನ್ನೂ ಕೂಡ ಪಡೆಯದೇ ಸಂಸ್ಥೆ ಕಟ್ಟಿದ ಮಹಾಚೇತನ ಎಂದು ಎಪಿಸಿಎಂಎಸ್ ನಿವೃತ್ತ ಸಿಇಒ ಹಾಗೂ ಹಾಲೀ ನಿರ್ದೇಶಕಿ ಬಿ.ಎಂ.ಪಾರ್ವತಿ ಹೇಳಿದರು
ವಕೀಲ ಆರ್.ಕೆ.ನಾಗೇಂದ್ರ, ಸಹಕಾರಿಗಳಾದ ಕೆ.ಪಿ.ಚಂದ್ರಕಲಾ, ಎಂ.ವಿ.ನಾರಾಯಣ ಮಾತನಾಡಿದರು.
ಕುಶಾಲನಗರ ವರ್ತಕರ ಸಂಘದ ಅಧ್ಯಕ್ಷ ಕೆ.ಎಸ್.ನಾಗೇಶ್,
ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಒಕ್ಕಲಿಗ ಸಮಾಜದ ಅಧ್ಯಕ್ಷ ಎಂ.ಕೆ.ದಿನೇಶ್, ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ, ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್, ಕಾವೇರಿ ನದಿ ಸಂರಕ್ಷಣಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್, ಕಸಾಪ ಮಾಜಿ ಅಧ್ಯಕ್ಷ ಲೋಕೇಶ್ ಸಾಗರ್,
ಕೇರಳ ಸಮಾಜದ ನಿರ್ದೇಶಕ ಕೆ.ವರದ, ಪುರಸಭಾ ಮಾಜಿ ಅಧ್ಯಕ್ಷ ಜೈವರ್ಧನ, ಬಿ.ಅಮೃತರಾಜು, ಮಾಜಿ ಸದಸ್ಯ ಜಗದೀಶ್, ಪ್ರಮುಖರಾದ ಕೆ.ಜಿ.ಮನು, ವಿ.ಸಿ.ಅಮೃತ್, ಕೆ.ಎಸ್.ಕೃಷ್ಣೇಗೌಡ,
ಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಉಪಾಧ್ಯಕ್ಷೆ ಚಂದ್ರಕಲಾ, ನಿರ್ದೇಶಕ ಶರತ್, ಮಾಜಿ ಸದಸ್ಯರಾದ ಕೆ.ಎಸ್.ರತೀಶ್, ಆರ್.ಕೆ.ಚಂದ್ರು, ಸುಂಟಿಕೊಪ್ಪ ಕೆ.ಎಸ್.ಮಂಜುನಾಥ್, ಕ್ಲೈವ ಪೊನ್ನಪ್ಪ, ಏಳನೇ ಹೊಸಕೋಟೆ ರಮೇಶ್, ಪುಂಡರೀಕಾಕ್ಷ, ಸಿ.ವಿ.ನಾಗೇಶ್ ಮೊದಲಾದವರಿದ್ದರು.
Back to top button
error: Content is protected !!