ಕಾರ್ಯಕ್ರಮ

ಬಸವನಹಳ್ಳಿ ಜೇನು ಕುರುಬ ಕೊರಗ ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಸಭೆ

ಸೌಲಭ್ಯಗಳಿಗೆ ರಾಜ್ಯ ಹಾಗು ಕೇಂದ್ರಕ್ಕೆ ಆಗ್ರಹ

ಕುಶಾಲನಗರ, ಜ 18 : ಸ್ವಾತಂತ್ರ್ಯ ದೊರಕಿ 79 ವರ್ಷಗಳು ಕಳೆದರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ತೀವ್ರ ಕಡೆಗಣನೆಗೆ ತುತ್ತಾಗಿರುವ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಅಭಿವೃದ್ಧಿ ಗಾಗಿ ಪ್ರತ್ಯೇಕವಾದ ನಿಗಮ ಮಂಡಳಿ ರಚಿಸಬೇಕೆಂದು ಜೇನು ಕುರುಬ ಹಾಗೂ ಕೊರಗ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಂಗಳೂರಿನ ಎಂ.ಸುಂದರ್ ದಳುವಾಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು,
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಗಾಗಲೇ ಈ ಎರಡು ಸಮುದಾಯಗಳನ್ನು ನೈಜ ದುರ್ಬಲ ಬುಡಕಟ್ಟು ಸಮುದಾಯ ಎಂದು ಘೋಷಿಸಿದೆ.
ಬುಡಕಟ್ಟು ಕಲಂ 51 ರಲ್ಲಿ ನಮ್ಮ ಈ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಂಡಿವೆ. ಸರ್ಕಾರಗಳ ಎಲ್ಲಾ ಯೋಜನೆಗಳು ಭೂಮಿಯ ಆಧಾರಿತವಾಗಿರುವುದರಿಂದ ನಮ್ಮ ಈ ಸಮುದಾಯ ಗಳಲ್ಲಿ ಭೂಮಿಯೇ ಇಲ್ಲದ ಕಾರಣ ಸರ್ಕಾರದ ಯಾವ ಯೋಜನೆಗಳು ಇದೂವರೆಗೂ ತಲುಪಿಲ್ಲ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಗಳಿಗೆ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಕೂಡಲೇ ಸರ್ಕಾರ ನಮ್ಮ ಒಕ್ಕೂಟದ ಮನವಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಕೂಡಲೇ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಅಭಿವೃದ್ಧಿಗೆ ನಿಗಮ ಮಂಡಳಿ ರಚಿಸಬೇಕು ಎಂದು ಸುಂದರ್ ಆಗ್ರಹಸಿದರು.
ಒಕ್ಕೂಟದ ಉಪಾಧ್ಯಕ್ಷ ಹುಣಸೂರಿನ ಜೆ‌.ಟಿ.ರಾಜಪ್ಪ ಮಾತನಾಡಿ, ಜೇನು ಕುರುಬರು ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಕೊರಗ ಸಮುದಾಯದವರು ಕೇವಲ ದಕ್ಷಿಣ ಕನ್ನಡ ಹಾಗೂ ಉಡುಪಿ ಯಲ್ಲಿದ್ದಾರೆ.
ನಮ್ಮ ಈ ಎರಡೂ ಸಮುದಾಯಗಳ ಮಕ್ಕಳು ಶಿಕ್ಷಣ ಪಡೆದರೂ ಕೂಡ ಸರ್ಕಾರದಿಂದ ಉದ್ಯೋಗವಕಾಶಗಳು ಸಿಗುತ್ತಿಲ್ಲ.
1967 ರಲ್ಲಿ ಹುಣಸೂರಿನಲ್ಲಿ ಇದ್ದಂತಹ ಜೇನುಕುರುಬರ ಸಂಘದ ಕಾರ್ಯಾಲಯವನ್ನು 2010 ರಲ್ಲಿ ಮುಚ್ಚಲಾಗಿದ್ದು ಕೂಡಲೇ ಕಛೇರಿಯನ್ನು ಆರಂಭಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಜೇನು ಕುರುಬರ ಅಭಿವೃದ್ಧಿ ಸಂಘದ ಕೊಡಗು ಅಧ್ಯಕ್ಷ ಜೆ.ಟಿ.ಕಾಳಿಂಗ ಮಾತನಾಡಿ, ಕೊರಗ ಹಾಗೂ ಜೇನು ಕುರುಬ ಸಮುದಾಯಗಳನ್ನು ಸರ್ಕಾರಗಳು ಕಡೆಗಣಿಸಿರುವ ಕಾರಣ ಯಾವುದೇ ಸೌಲಭ್ಯಗಳು ದೊರಕುತ್ತಿಲ್ಲ.
ಹಾಗಾಗಿ ಸಮಗ್ರ ಸೌಲಭ್ಯಗಳು ಶೋಷಿತರು ಹಾಗೂ ಸಮಾಜದ ಕಟ್ಟಕಡೆಯ ಜನಾಂಗವಾಗಿರುವ ಈ ಸಮುದಾಯಗಳಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿ ಬಳಿ ಚಳುವಳಿ ನಡೆಸುವುದಾಗಿ ಪ್ರಕಟಿಸಿದರು.
ನಾಲ್ಕೇರಿ ಗ್ರಾಪಂ ಅಧ್ಯಕ್ಷರೂ ಆದ ಒಕ್ಕೂಟದ ಸದಸ್ಯ ಜೆ.ಎಂ.ಸೋಮಯ್ಯ,
ಕಾರ್ಯದರ್ಶಿ ಜೆ.ಟಿ.ಚಂದ್ರು, ಮನೋಜ್, ತಿತಿಮತಿ ಪುಷ್ಪ, ಪಿರಿಯಾಪಟ್ಟಣದ ಗೌರಮ್ಮ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!