ಮನವಿ

ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಎಸ್ಪಿಗೆ ಆಹ್ವಾನ

ಕುಶಾಲನಗರ, ಫೆ 12: ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ ಅಭಿನಂದಿಸಿದರು.
ಹಾಗೆಯೇ ಈ ತಿಂಗಳ ತಾ. 14 ರಂದು ಕುಶಾಲನಗರದಲ್ಲಿ ಆಯೋಜಿಸಿರುವ
ಪುಲ್ವಾಮಾ ‌ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪುಲಿಯಂಡ.ಎಂ.ಚಂಗಪ್ಪ,
ಬಿ.ಎಂ.ರವೀಂದ್ರ,
ಜಿ.ಕೆ.ದಿನೇಶ್ ಕುಮಾರ್,
ಹರೀಶ್ ಕುಮಾರ್, ಎನ್.ಎಂ.ಭೀಮಯ್ಯ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!