ಶಿಕ್ಷಣ

ವಿದ್ಯಾರ್ಥಿಗಳಿಗೆ ವೃತ್ತಿಪರ ಮಾರ್ಗದರ್ಶನ ತರಬೇತಿ

ಕುಶಾಲನಗರ, ಮಾ 14: ಕುಶಾಲನಗರ ಬಾಲಕಿಯರ ಪ್ರೌಢಶಾಲೆ  10ನೇ ತರಗತಿ ವಿದ್ಯಾರ್ಥಿಗಳಿಗೆ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ JCI Kushalanagara Cauvery ಸದಸ್ಯರ ಸಹಕಾರದೊಂದಿಗೆ Aprameya I.T. Solutions ವತಿಯಿಂದ ವಿಶೇಷ ವೃತ್ತಿಪರ ಮಾರ್ಗದರ್ಶನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ತರಬೇತುದಾರರಾಗಿ Rajanikanth M J ಅವರು 10ನೇ ತರಗತಿಯ ನಂತರ ಇರುವ ವಿವಿಧ ಶಿಕ್ಷಣ ಮಾರ್ಗಗಳು ಹಾಗೂ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ತಮ್ಮ ಆಸಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು ಸರಿಯಾದ ದಾರಿಯಲ್ಲಿ ಮುಂದುವರೆಯಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ Jagadish B ಹಾಗೂ Ravi C ಅವರು ಸಹ ತರಬೇತುದಾರರಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿ, ವಿವಿಧ ವಿಷಯಗಳ ಬಗ್ಗೆ ಪ್ರಶ್ನೆಗಳು ಕೇಳಿ ಸಂವಾದ ನಡೆಸಿದರು. ವಿಶೇಷವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದಾತ್ಮಕ (Interaction) ಸೆಷನ್ ಕೂಡ ನಡೆಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ Naveen Kumar P ಮತ್ತು Venugopalan ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಭವಿಷ್ಯದ ವೃತ್ತಿ ಆಯ್ಕೆ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.

Related Articles

Leave a Reply

Your email address will not be published. Required fields are marked *

Back to top button
error: Content is protected !!