ಕುಶಾಲನಗರ ಮಾ 17:ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಗೋಡೆ ಗಡಿಯಾರವನ್ನು ವ್ಯವಸ್ಥಾಪಕ ರಾಮರಾವ್ ಸೋಮವಾರ ಸಂಜೆ ಚೇಂಬರ್ ಕಚೇರಿಯಲ್ಲಿ ಚೇಂಬರ್ ಅಧ್ಯಕ್ಷ ಕೆ ಎಸ್ ನಾಗೇಶ್ ಮತ್ತು ತಂಡಕ್ಕೆ ಹಸ್ತಾಂತರಿಸಿ, ನಂತರ ಮಾತನಾಡಿದ ಅವರು, ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಸದಾ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡು ವರ್ತಕರ ಪರವಾಗಿ ನಿಂತಿರುವುದನ್ನು ನಿಮ್ಮೆಲ್ಲರ ಹಾಗೆ ನಾವು ಗಮನಿಸಿದ್ದೇವೆ. ಚೇಂಬರ್ ಆಫ್ ಕಾಮರ್ಸ್ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವೆಯನ್ನು ಮಾಡಲು ಒಳ್ಳೆಯ ಸಮಯ ಬರಲಿ ಎಂದು ಗಡಿಯಾರ ನೀಡಿದ್ದೇವೆ ಎಂದರು.
ಗಡಿಯಾರ ಸ್ವೀಕರಿಸಿ ಮಾತನಾಡಿದ ಕೆ.ಎಸ್. ನಾಗೇಶ್, ಇಂತಹ ವಿಶಾಲ ಹೃದಯದ ದಾನಿಗಳಿಂದ ಸೇವೆ ಮಾಡುವ ಸ್ಪೂರ್ತಿ ಹೆಚ್ಚಾಗುತ್ತದೆ ಎಂದರು.
ಚೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ ಚಿತ್ರ ರಮೇಶ್, ಪದಾಧಿಕಾರಿಗಳಾದ ಎಸ್.ಕೆ.ಸತೀಶ್, ಪಿ.ಎಂ.ಮೋಹನ್, ವಿಮಲ್ ಜೈನ್, ಪೈಯಾಜ್ ಅಹಮದ್ ಮತ್ತಿತ್ತರು ಹಾಜರಿದ್ದರು.
Back to top button
error: Content is protected !!