ಪ್ರಕಟಣೆ

ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ನಾಗಪ್ಪ ಆಯ್ಕೆ

ಕೂಡಿಗೆ, ಜೂ. 12: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೂಡಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ನಾಗಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಉಪಾಧ್ಯಕ್ಷರಾಗಿ ತಿತಮತಿ ಕಾಲೇಜಿನಿ ಉಪನ್ಯಾಸಕಿ ರೂಪ , ಪ್ರಧಾನ ಕಾರ್ಯದರ್ಶಿ ಯಾಗಿ ಐಗೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹೆಚ್.ಕೆ. ಉಮೇಶ್ ಕುಮಾರ್, ಕಾರ್ಯಾಧ್ಯಕ್ಷರಾಗಿ ಶನಿವಾರಸಂತೆ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಿ.ಟಿ ಸೋಮಶೇಖರ್, ಖಜಾಂಚಿಯಾಗಿ ಕುಶಾಲನಗರ ಕಾಲೇಜಿನ ನಾಗೇಶ್, ಪ್ರಧಾನ ಸಂಘಟನಾ ಕಾರ್ಯದರ್ಶಿ ಕುಶಾಲನಗರ ಪದವಿಪೂರ್ವ ಕಾಲೇಜಿನ ಟಿ.ಡಿ.ರಾಜು, ಕಾರ್ಯದರ್ಶಿ ಯಾಗಿ ವಿರಾಜಪೇಟೆ ಪದವಿಪೂರ್ವ ಕಾಲೇಜಿನ ವಿವೇಕ್, ಜಂಟಿ ಕಾರ್ಯದರ್ಶಿ ಯಾಗಿ ಮದಾಪುರ ಕಾಲೇಜಿನ ರಾಜು ಸುದರಂ, ಸಂಚಾಲಕರಾಗಿ ತಿತಿಮತಿ ಕಾಲೇಜಿನ ವಿನೋದ್ ಕುಮಾರ್ ಆಯ್ಕೆಗೊಂಡಿರುತ್ತಾರೆ ಎಂದು ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!