ಕುಶಾಲನಗರ ಆ 29: ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ ಶ್ರಾವಣ ಪೂರ್ಣಿಮೆ ಅಂಗವಾಗಿ ಕೊಡಗು-ಮೈಸೂರು ಗಡಿ ಸೇತುವೆ ಬಳಿಯ ಕಾವೇರಿ ಕ್ಷೇತ್ರದಲ್ಲಿ 162ನೇ ಹುಣ್ಣಿಮೆ ಪೂಜಾ ಕೈಂಕರ್ಯ ಜರುಗಿತು.
ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಕಾವೇರಿ ಮಾತೆಗೆ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಿ
ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತರಿಗೆ ಪ್ರಸಾದ, ಅನ್ನಸಂತರ್ಪಣೆ ನೆರವೇರಿಸಲಾಯಿತು. ಉತ್ತಮ ಮಳೆ ಬೆಳೆ, ನಾಡಿನ ಸಮೃದ್ದಿಗಾಗಿ ಪ್ರಾರ್ಥಿಸಲಾಯಿತು.
ಕಾವೇರಿ ಚಂದ್ರು, ಲಕ್ಷ್ಮಿ, ಲಿಖಿತಾ ಕುಟುಂಬದಿಂದ ದಿನದ ಪೂಜಾ ಸೇವಾರ್ಥ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಪೂಜಾ ಸೇವಾರ್ಥದಾರ ಕಾವೇರಿ ಚಂದ್ರು ಅವರು, ಪ್ರಸಕ್ತ ಸಾಲಿನಲ್ಲಿ ಮಳೆಯ ಅಭಾವ ಎದುರಾಗಿರುವುದು ವಿಷಾದಕರ ಸಂಗತಿ. ಮಳೆಯಿದ್ದರೆ ನಾಡು ಸಮೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ನಾಡಿನ ಸುಭೀಕ್ಷೆಗೆ ಪ್ರಾರ್ಥಿಸಲಾಗಿದೆ ಎಂದರು.
ಬಾರವಿ ಕನ್ನಡ ಸಂಘದ ಬಬೀಂದ್ರ ಪ್ರಸಾದ್ ಪೂಜಾ ಕೈಂಕರ್ಯದ ಬಗ್ಗೆ ವಿವರಿಸಿದರು.
ಸತೀಶ್ ತಂಡದಿಂದ ವಾದ್ಯಗೋಷ್ಠಿ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ
ಬಾರವಿ ಕಾವೇರಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಮಂಜು, ರುದ್ರ, ಕೊಪ್ಪ ಚಂದ್ರು, ವಿನಯ್ ಮತ್ತಿತರರು ಇದ್ದರು.
Back to top button
error: Content is protected !!