ಕುಶಾಲನಗರ, ಅ 21: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮನೆ ಹಾನಿಯಾದ ಘಟನೆ ನಡೆದಿದೆ.
ಸುಂದರನಗರದ ನಿವಾಸಿಗಳಾದ ಸುರೇಶ್ ಮತ್ತು ಧನಲಕ್ಷ್ಮಿ ಅವರ ಮನೆ ಹಾನಿಯಾಗಿದೆ. ಅದೃಷ್ಟವಷಾತ್ ಯಾರಿಗೂ ಯಾವುದೇ ಅನಾಹುತ ಸಂಭವಿಸಲಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ, ಸ್ಥಳಕ್ಕೆ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಘಟನೆ ಬಗ್ಗೆ ಸಂಬಂಧಪಟ್ಟ ಕಂದಾಯ ಪರಿವೀಕ್ಷಕರ ಗಮನಕ್ಕೆ ತಂದರು. ಬಳಿಕ ಗ್ರಾಮ ಲೆಕ್ಕಿಗರಾದ ಗುರುದರ್ಶನ್ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಮಳೆಯಿಂದಾಗಿ ಸುರೇಶ್ ಧನಲಕ್ಷ್ಮಿ ಅವರ ಮನೆಗೋಡೆ ಕುಸಿದು ಬಿದ್ದಿದೆ. ಈಗಾಗಲೇ ಸಂಬಂಧಪಟ್ಟ ಕಂದಾಯ ಇಲಾಖೆಯವರು ಪರಿಶೀಲನೆ ನಡೆಸಿದ್ದಾರೆ. ಹಾನಿಹಾನಿಗೊಳಗಾದ ಸುರೇಶ್ ಅವರು ತೀರಾ ಕಡು ಬಡವರಾಗಿದ್ದು,ಸರ್ಕಾರದ ಸೂಕ್ತ ಪರಿಹಾರವನ್ನು ಒದಗಿಸಿಕೊಡುವಂತೆ ಕೆ.ಬಿ.ಶಂಶುದ್ಧೀನ್ ಅವರು ಒತ್ತಾಯಿಸಿದರು.
ಈ ಸಂದರ್ಭ ಸಿಬ್ಬಂದಿ ಲೋಕೇಶ್ ಹಾಗೂ ಗ್ರಾಮಸ್ಥರು ಇದ್ದರು.
Back to top button
error: Content is protected !!