ಕ್ರೀಡೆ

ಕೂಡಿಗೆ ಸರಕಾರಿ ಪಪೂ ಕಾಲೇಜಿನ ರಂಜಿತ್ ಚೆಸ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ

ಕುಶಾಲನಗರ, ಅ 15: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ರಂಜಿತ್ ಗುರುರಾಜ್ ಎಂಬವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್‌ ಪಂದ್ಯಾವಳಿಯಲ್ಲಿ ಜಯಗಳಿಸಿ ರಾಷ್ಟ್ರ ಮಟ್ಟಕ್ಕೆ ಅಯ್ಕೆಯಾಗಿರುತ್ತಾನೆ.
‌‌ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ಬಿಡದಿಯಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ (ಚದುರಂಗ) ಸ್ಪರ್ಧೆ ಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ರಾಷ್ಟ್ರ ಮಟ್ಟಕ್ಕೆ ಅಯ್ಕೆಯಾದ ವಿಧ್ಯಾರ್ಥಿ ಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ. ಕೆ. ನಾಗರಾಜಶೆಟ್ಟಿ ಮತ್ತು ಪ್ರಾಂಶುಪಾಲ ಡಾ.ಬಸಪ್ಪ ಸೇರಿದಂತೆ ಕಾಲೇಜು ‌ಉಪನ್ಯಾಸಕ ವೃಂದ ಅಭಿನಂದಿಸಿದರು.
ರಂಜಿತ್ ಗೆ ಮಣಿ ತರಬೇತಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us