ಕುಶಾಲನಗರ, ಸೆ 17: ಕುಶಾಲನಗರ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪೂಜೋತ್ಸವದ ಅಂಗವಾಗಿ ಬೆಳಗ್ಗೆ ಕಾವೇರಿ ನದಿಯಿಂದ ಮಂಗಳವಾದ್ಯ ಹಾಗೂ ಸುಮಂಗಲಿಯರಿಂದ ಪೂರ್ಣಕುಂಭ ಕಳಸದೊಂದಿಗೆ ಅಲಂಕೃತ ಮಂಟಪದಲ್ಲಿ ವಿಶ್ವಕರ್ಮ ಮೂರ್ತಿಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಮಾಜದ ಮಹಿಳೆಯರ ಕೋಲಾಟ ಗಮನ ಸೆಳೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಾಸ್ತುಶಿಲ್ಪಿಯಾಗಿ ಇಡೀ ಪ್ರಪಂಚದ ನಿಮಾತೃ ಎಂಬ ಇತಿಹಾಸ ಹೊಂದಿರುವ ವಿಶ್ವಕರ್ಮರ ಆರಾಧನೆ ಮೂಲಕ ಅವರ ಕೊಡುಗೆ ಸ್ಮರಿಸುವ ಕಾರ್ಯ ಶ್ರೇಷ್ಠವಾದುದು.
ವಿಶ್ವಕರ್ಮ
ಸಮಾಜಕ್ಕೆ ಸ್ವಂತ ಭವನ ಹೊಂದಬೇಕೆಂಬ ಬೇಡಿಕೆ ಈಡೇರಿಸಲು ತಾನು ಕ್ರಮವಹಿಸಲಿದ್ದೇನೆ. ಸಮಾಜಕ್ಕೆ ಅಗತ್ಯ ನಿವೇಶನ ಒದಗಿಸಲು ದಾನಿಗಳು ಮುಂದಾಗಿರುವುದು ಉತ್ತಮ ಬೆಳವಣಿಗೆ.ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಸಮಾಜದ ತಾಲೂಕು ಅಧ್ಯಕ್ಷರಾದ ಹೆಚ್.ಬಿ.ಲಿಂಗಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ ಸಮಾಜದ ವತಿಯಿಂದ ಶಾಸಕ ಡಾ.ಮಂತರ್ ಗೌಡ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪಿರಿಯಾಪಟ್ಟಣ ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಹೇಶ್ ಆಚಾರ್ಯ, ಸೋಮವಾರಪೇಟೆ ಗೌಡಳ್ಳಿಯ ಶಿಲ್ಪಿ ಮಂಜುನಾಥ್ ಆಚಾರ್ಯ, ಸಮಾಜದ ಗೌರವಾಧ್ಯಕ್ಷ ವಿ.ಕುಮಾರ್,ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ವರದರಾಜು, ಪ್ರಮುಖರಾದ ವಿ.ಕೃಷ್ಣ, ವಿವಿಧ ಘಟಕಗಳ ಪದಾಧಿಕಾರಿಗಳಾದ ಹೆಚ್.ಟಿ.ಮಂಜುನಾಥ್, ಜಯಶ್ರೀ, ನಿಂಗಾಚಾರ್, ದುರ್ಗೇಶ್, ರಾಜಮೂರ್ತಿ, ಸದಾನಂದ, ಪ್ರಭಾವತಿ ಲಿಂಗಮೂರ್ತಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು ಇದ್ದರು.
ಇದೇ ಸಂದರ್ಭ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
Back to top button
error: Content is protected !!