ಪ್ರತಿಭಟನೆ

ತೊರೆನೂರಿನಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಕುಶಾಲನಗರ, ನ 05: ಸಾರಿಗೆ ಇಲಾಖೆ ವಿರುದ್ಧ ಶನಿವಾರ ತೊರೆನೂರು ಗ್ರಾಮದಲ್ಲಿ ಪ್ರತಿಭಟನೆ ನಡೆಯಿತು. ಗ್ರಾಮದ ಮೂಲಕ ಹಾದುಹೋಗುವ ಸಾರಿಗೆ ಬಸ್ ಗಳು
ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುತ್ತಿಲ್ಲ. ಗ್ರಾಮದಲ್ಲಿ ಬಸ್ ನಿಲುಗಡೆಗೊಳಿಸಲು ಹಲವು ಬಾರಿ‌ ಮನವಿ‌ ಮಾಡಲಾಗಿದ್ದರೂ ಕೂಡ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿರಾಕರಿಸುತ್ತಿರುವುದರಿಂದ ತೀವ್ರ ಅನಾನುಕೂಲ ಉಂಟಾಗಿದೆ. ಈ‌ ನಿಟ್ಟಿನಲ್ಲಿ ತೊರೆನೂರು ಗ್ರಾಮದ ಕೊಡಗು ರಕ್ಷಣಾ ವೇದಿಕೆ ಘಟಕದ ವತಿಯಿಂದ ಶನಿವಾರ ಬಸ್ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಬೇಡಿಕೆ ಈಡೇರಿಸುವ ವರೆಗೆ ಪ್ರತಿಭಟನೆ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!