ಶಿಕ್ಷಣ

ಸುಂದರನಗರ: ಅಂಗನವಾಡಿಗೆ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಭೇಟಿ, ಪರಿಶೀಲನೆ

ಕುಶಾಲನಗರ,ಆ 26: ಕೂಡುಮಂಗಳೂರು ಗ್ರಾ.ಪಂ‌ ನ‌ ಸುಂದರನಗರ ಅಂಗನವಾಡಿಗೆ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಭೇಟಿ ನೀಡಿದರು.‌
ಸುಂದರನಗರ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಲ್ಲಿನ ಸಮಸ್ಯೆಗಳ ಬಗ್ಗೆ ಅಂಗನವಾಡಿ ಶಿಕ್ಷಕಿಯಿಂದ ಮಾಹಿತಿ ಪಡೆದರು. ಡೆಂಗ್ಯೂ‌ ಹಾಗೂ ಇನ್ನಿತರ ಕಾಯಿಲೆಗಳು ಹರಡುತ್ತಿರುವ ಹಿನ್ನಲೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅಂಗನವಾಡಿಯಲ್ಲಿ ಹಾಗೂ ಸುತ್ತಮುತ್ತಲು ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಅಂಗನವಾಡಿ ಶಿಕ್ಷಕಿಗೆ ತಿಳಿಸಿದರು.
ಗರ್ಭಿಣಿಯರಿಗೆ,‌ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಕಿಟ್ ವಿತರಣೆ ಬಗ್ಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆಯೇ ಎಂದು ವಿಚಾರಿಸಿದರು.
ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಸುಂದರನಗರ ಅಂಗನವಾಡಿಗೆ ಭೇಟಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಆಲಿಸಲಾಯಿತು. ಸರ್ಕಾರದಿಂದ ನೀಡಲಾಗುವ ಪೌಷ್ಟಿಕ ವಿತರಣೆಯ ಬಗ್ಗೆ ವಿಚಾರಿಸಲಾಯಿತು. ರೋಗ ರುಜಿನಗಳು ಹರಡದಂತೆ ಕ್ರಮವಹಿಸಲು ತಿಳಿಸಲಾಗಿದೆ. ಹಾಗೆಯೇ ಪಂಚಾಯಿತಿಯಿಂದ ಅಂಗನವಾಡಿಗೆ ಶುದ್ಧ ಕುಡಿಯುವ ನೀರು ನೀಡಲು, ಆರ್.ಓ ಯೂನಿಟ್ ಅಳವಡಿಸಲಾಗುವುದು ಎಂದರು.
ಈ ಸಂದರ್ಭ ಸುಂದರನಗರ ಅಂಗನವಾಡಿ ಶಿಕ್ಷಕಿ ಬೋಜಮ್ಮ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!