ಸಭೆ

ಬಸವನಹಳ್ಳಿ ಸಹಕಾರ ಸಂಘದ ಸಾಮಾನ್ಯ ಸಭೆ

ಕುಶಾಲನಗರ ಆ 29: ಬಸವನಹಳ್ಳಿಯಲ್ಲಿರುವ ಸೋಮವಾರಪೇಟೆ ತಾಲ್ಲೂಕು ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಎಸ್, ಆರ್, ಅರುಣ್‌ ರಾವ್ ನವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಳೆದ ಮಾಸಿಕ ಸಭೆಯ ಲೆಕ್ಕ ಪತ್ರಗಳ ಬಗ್ಗೆ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚೆಗಳು ನಡೆದವು. ಸಂಘದ ಅಭಿವೃದ್ಧಿಗೆ ಪೂರಕವಾದ ವಿವಿಧ ಯೋಜನೆಯನ್ನು ಕೈಗೊಳ್ಳುವ ವಿಷಯಗಳ ಬಗ್ಗೆ ಆಡಳಿತ ಮಂಡಳಿಯಲ್ಲಿ ಅನೇಕ ವಿಷಯಗಳನ್ನು ಪ್ರಸ್ತಾವನೆ ಮಾಡಿ ಅದರ ಮುಖೇನ ಸಂಘದ ಬೆಳವಣಿಗೆಗೆ ಬೇಕಾಗುವ ವಿಚಾರಗಳ ಬಗ್ಗೆ ಚರ್ಚೆಗಳು ನಡೆದವು. ಮುಂದಿನ ದಿನಗಳಲ್ಲಿ ಮಹಾಸಭೆ ನಡೆಸುವ ವಿಷಯಗಳ ವಿಚಾರವಾಗಿ ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮನು, ಕಾರ್ಯದರ್ಶಿ ಹನಿಕುಮಾರ್. ಸೇರಿದಂತೆ ಸರ್ವ ನಿರ್ದೇಶಕರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!