ಕುಶಾಲನಗರ, ಸೆ 04: ಕೊಡಗು ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ಮಿತಿಮೀರಿದೆ. ಇತ್ತೀಚಿನ ಕೆಲವು ತಿಂಗಳಲ್ಲಿ ಕಾಡಾನೆಗಳ ದಾಳಿಗೆ ಹಲವು ಜೀವ ಹಾನಿಯಾಗಿದೆ. ಸೋಮವಾರ ಕೆದಕಲ್ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಬೈಕ್ ನಡಿ ಸಿಲುಕಿದ್ದ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರು ಚೀರಾಟ ಕೇಳಿ ಕಾಡಾನೆ ಕಾಫಿ ತೋಟದೊಳಗೆ ನುಗ್ಗಿದ ಪರಿಣಾಮ ಜೀವಹಾನಿ ತಪ್ಪಿದೆ. ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Back to top button
error: Content is protected !!