ಕುಶಾಲನಗರ, ಸೆ 16: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಡಗಿನ ಭಾಗಮಂಡಲದ ಯು.ಕೆ.ಜಿತನ್ (33) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾರ್ಥಿವ ಶರೀರ ರವಾನೆ ವೇಳೆ ಕುಶಾಲನಗರದಲ್ಲಿ ಮಧ್ಯರಾತ್ರಿ ಮಾಜಿ ಸೈನಿಕರು, ಬಿಜೆಪಿ ಯುವಮೋರ್ಚಾ ಪ್ರಮುಖರು ಅಂತಿಮ ದರ್ಶನ ಪಡೆದರು.
Back to top button
error: Content is protected !!