ಕುಶಾಲನಗರ, ಜು 24: ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಸಫಾನ ಮತ್ತು ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು ಮಧ್ಯಾಹ್ನ ಸುಮಾರು 01.30 ಗಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಲಂ: 309(6) ಬಿಎನ್ಎಎಸ್ ಆಕ್ಟ್ ಆಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಪಾಲಿಬೆಟ್ಟದ ಮೇಕೂರು ಹೊಸ್ಕೇರಿಯ ಮುನಾವರ್, (26 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕೈಗೊಳ್ಳಲಾಗಿರುತ್ತದೆ.
ಸದರಿ ಆರೋಪಿ ಮುನಾವರ್ನನ್ನು ವಿಚಾರಣೆ ನಡೆಸಿದ್ದು, ಸಫಾನ ರ ಅಕ್ಕನ ಗಂಡನಾದ ಮುಜೀದ್ ಎಂಬಾತನು ಆಟೋ ಚಾಲಕನಾಗಿದ್ದು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಆರೋಪಿ ಮುನಾವರ್ ನೊಂದಿಗೆ ಸೇರಿ ಶೀಘ್ರವಾಗಿ ಹಣ ಮಾಡುವ ಉದ್ದೇಶದಿಂದ ಮುಜೀದ್ನ ಪತ್ನಿಯ ತಂಗಿಯಾದ ಸಫಾನ ರವರು ಮನೆಯಲ್ಲಿ ಅತ್ತೆಯೊಂದಿಗೆ ಇಬ್ಬರು ಮಾತ್ರ ಇರುವುದರಿಂದ ಅವರ ಮನೆಯಲ್ಲಿರುವ ಹಣ ಮತ್ತು ಚಿನ್ನಭಾರಣಗಳನ್ನು ದರೋಡೆ ಮಾಡಿದರೆ ಅವರು ಘಟನೆ ಕುರಿತು ಮೊದಲು ಅಕ್ಕನ ಗಂಡನಾಗಿರುವುದರಿಂದ ನನಗೆ ತಿಳಿಸುತ್ತಾರೆ. ಆ ಸಂದರ್ಭ ಪೊಲೀಸ್ ಠಾಣೆ & ಕೋರ್ಟ್ ತೆರಳದಂತೆ ಮಾಡಬಹುದಾಗಿದೆ ಎಂದು 15 ದಿನಗಳಿಂದ ಸಂಚು ರೂಪಿಸಿರುತ್ತಾರೆ.
ದಿನಾಂಕ: 21-07-2025 ರಂದು ಮಧ್ಯಾಹ್ನ ವೇಳೆಯಲ್ಲಿ ಮುಜೀದ್ ಮತ್ತು ಮುನಾವರ್ ಇಬ್ಬರ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡು ಕಾರ್ನಲ್ಲಿ ಮುನಾವರ್ನನ್ನು ಕೊಂಡಂಗೇರಿಗೆ ಬಿಟ್ಟು ಈ ಮೊದಲೇ ರೂಪಿಸಿದ ಸಂಚಿನಂತೆ ಸಫಾನ ಮತ್ತು ಸಾರಮ್ಮ ಮನೆಯ ಬಳಿ ಬಂದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ದರೋಡೆ ಮಾಡಿರುತ್ತಾರೆ ಹಾಗೂ ಈ ಕೃತ್ಯಕ್ಕೆ ಸಂಚು ರೂಪಿಸಿದ ಸಫಾನರವರ ಅಕ್ಕನ ಗಂಡನಾದ ಮುಜೀದ್ 2-ಗ್ಲೌಸ್, 01-ಕತ್ತಿ & 01-ಚಾಕು ಅನ್ನು ನೀಡಿ ಮುನಾವರ್ ನನ್ನು ಈ ಕೃತ್ಯ ಎಸಗುವಂತೆ ಕಳುಹಿಸಿರುತ್ತಾನೆ. ಈ ಕೃತ್ಯದಿಂದ ಸಿಗುವ ಹಣ & ಚಿನ್ನಾಭರಣಗಳನ್ನು ಹಂಚಿಕೊಳ್ಳವ ಬಗ್ಗೆ ನಿರ್ಧರಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುತ್ತದೆ.
ಸದರಿ ಪ್ರಕರಣ ಮಾಸ್ಟರ್ ಮೈಂಡ್ ಆದ ಪಾಲಿಬೆಟ್ಟ ಗ್ರಾಮದ ನಿವಾಸಿ ಆರೋಪಿ ಮುಜೀದ್ನನ್ನು ದಿನಾಂಕ: 23-07-2025 ರಂದು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮತ್ತು ಕೃತ್ಯಕ್ಕೆ ಬಳಸಿದ ಚಾಕು, ಗ್ಲೌಸ್ ಮತ್ತು ಮಾರುತಿ ವ್ಯಾಗನರ್ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
Back to top button
error: Content is protected !!